ಬಂಟ್ವಾಳ ಕಚೇರಿಯ ಭೂಮಾಪಕ ರಾಮಚಂದ್ರರವರು ನಿಧನ
ಬಂಟ್ವಾಳ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಭೂಮಾಪಕರಾಗಿ ಕರ್ತವ್ಯ ಸಲ್ಲಿಸುತ್ತಿದ್ದ 48 ವರ್ಷ ಪ್ರಾಯದ ರಾಮಚಂದ್ರರವರು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಆಗಸ್ಟ್ 7ರಂದು ಗುರುವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮೂಲತಃ ಚಾಮರಾಜನಗರ ಜಿಲ್ಲೆಯವರಾದ ಅವರು 2010ರಲ್ಲಿ ಇಲಾಖೆಗೆ ಕರ್ತವ್ಯಕ್ಕೆ ಸೇರಿದ್ದರು. ಅವರ ಪತ್ನಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ಉದ್ಯೋಗಿಯಾಗಿದ್ದಾರೆ.




