May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದೇಶದ ಹಿತಕ್ಕಾಗಿ ಕಿಂಚಿತ್ತಾದರೂ ಕೊಡುಗೆ ನೀಡೋಣ – ಮಟ್ಟಾರು ವಿಠಲ ಕಿಣಿ

ದೇಶದ ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಮಹನೀಯರ ಸ್ಮರಣೆಯೊಂದಿಗೆ ದೇಶದ ಹಿತಕ್ಕಾಗಿ ಕಿಂಚಿತ್ತಾದರೂ ಕೊಡುಗೆ ನೀಡುವ ಮನೋಭಾವ ಇರಲಿ ಎಂದು ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರು ವಿಠಲ ಕಿಣಿ ಕರೆ ನೀಡಿದರು.

ಅವರು ಆಗಸ್ಟ್ 14ರಂದು ಗುರುವಾರ ನಗರದ ಕಾಪಿಕಾಡ್ ಬಳಿಯ ಅಂಗನವಾಡಿ ಕೇಂದ್ರದಲ್ಲಿ ಎಳೆಯ ಮಕ್ಕಳಿಗೆ ಸ್ವಾತಂತ್ರ್ಯ ಮುನ್ನಾದಿನ ತ್ರಿವರ್ಣ ಧ್ವಜ ಸಿಹಿ ತಿಂಡಿ, ಉಡುಗೊರೆ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹಾಗೂ ಸುವರ್ಣ ಸಂಭ್ರಮ ಸಮಿತಿ ಪ್ರಧಾನ ಸಂಚಾಲಕ ಪಿ.ಬಿ. ಹರೀಶ್ ರೈ, ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ. ಎನ್., ಕಾಪಿಕಾಡ್ ಸರಕಾರಿ ಶಾಲೆಯ ಮುಖ್ಯ ಶಿಕ್ಷಕಿ ಲೀನಾ ಡಿಸೋಜ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಸಿಂಧು, ಅಂಗನವಾಡಿ ಶಿಕ್ಷಕಿ ನಂದಾ, ಸಹಾಯಕಿ ಲಕ್ಷ್ಮೀ ಮೊದಲಾದವರು ಉಪಸ್ಥಿತರಿದ್ದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page