August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದೇಶದ ಹಿತಕ್ಕಾಗಿ ಕಿಂಚಿತ್ತಾದರೂ ಕೊಡುಗೆ ನೀಡೋಣ – ಮಟ್ಟಾರು ವಿಠಲ ಕಿಣಿ

ದೇಶದ ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಮಹನೀಯರ ಸ್ಮರಣೆಯೊಂದಿಗೆ ದೇಶದ ಹಿತಕ್ಕಾಗಿ ಕಿಂಚಿತ್ತಾದರೂ ಕೊಡುಗೆ ನೀಡುವ ಮನೋಭಾವ ಇರಲಿ ಎಂದು ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರು ವಿಠಲ ಕಿಣಿ ಕರೆ ನೀಡಿದರು.

ಅವರು ಆಗಸ್ಟ್ 14ರಂದು ಗುರುವಾರ ನಗರದ ಕಾಪಿಕಾಡ್ ಬಳಿಯ ಅಂಗನವಾಡಿ ಕೇಂದ್ರದಲ್ಲಿ ಎಳೆಯ ಮಕ್ಕಳಿಗೆ ಸ್ವಾತಂತ್ರ್ಯ ಮುನ್ನಾದಿನ ತ್ರಿವರ್ಣ ಧ್ವಜ ಸಿಹಿ ತಿಂಡಿ, ಉಡುಗೊರೆ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹಾಗೂ ಸುವರ್ಣ ಸಂಭ್ರಮ ಸಮಿತಿ ಪ್ರಧಾನ ಸಂಚಾಲಕ ಪಿ.ಬಿ. ಹರೀಶ್ ರೈ, ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ. ಎನ್., ಕಾಪಿಕಾಡ್ ಸರಕಾರಿ ಶಾಲೆಯ ಮುಖ್ಯ ಶಿಕ್ಷಕಿ ಲೀನಾ ಡಿಸೋಜ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಸಿಂಧು, ಅಂಗನವಾಡಿ ಶಿಕ್ಷಕಿ ನಂದಾ, ಸಹಾಯಕಿ ಲಕ್ಷ್ಮೀ ಮೊದಲಾದವರು ಉಪಸ್ಥಿತರಿದ್ದರು.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page