July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಧರ್ಮಸ್ಥಳ ವಿಚಾರಕ್ಕೆ ಕ್ರೈಸ್ತರ ದಫನ ಭೂಮಿಯನ್ನು ಎಳೆದು ತರುವ ಅಗತ್ಯವಿತ್ತೇ?

ಯಾವುದೇ ಪುರಾವೆಗಳಿಲ್ಲದೆ ಬಾಲಿಶವಾಗಿ ಹೇಳಿಕೆ ನೀಡಬಾರದು

ಮಂಗಳೂರು ಧರ್ಮಕ್ಷೇತ್ರದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಫಾದರ್ ಜೆ.ಬಿ. ಸಲ್ದಾನ್ಹಾ ಮತ್ತು ರೋಯ್ ಕ್ಯಾಸ್ಟಲಿನೊರವರಿಂದ ಜಂಟಿ ಪತ್ರಿಕಾ ಹೇಳಿಕೆ

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ನೆಲ ಅಗೆಯ ಬೇಕು ಎಂಬುದಾಗಿ ಹೇಳಿಕೆ ನೀಡಿರುವ ಅನಾಮಿಕ ಮುಸುಕುಧಾರಿ ವ್ಯಕ್ತಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯಾಗಿರುತ್ತಾನೆ. ಇದಕ್ಕಾಗಿ ವಿದೇಶದಿಂದ ಹಣ ಬರುತ್ತದೆ ಎಂಬ ಗಾಳಿ ಸುದ್ದಿಯನ್ನು ಆಧರಿಸಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೀಡಿದ ಹೇಳಿಕೆಗೆ ಮಂಗಳೂರು ಧರ್ಮಕ್ಷೇತ್ರದ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ವಂದನೀಯ ಡಾ. ಜೆ.ಬಿ. ಸಲ್ದಾನ್ಹಾ ಮತ್ತು ರೋಯ್ ಕ್ಯಾಸ್ಟಲಿನೊ ಪ್ರಶ್ನೆ ಎತ್ತಿದ್ದಾರೆ. “ಅಶೋಕ್ ರವರ ಹೇಳಿಕೆಗೆ ಪುರಾವೆ ಏನು? ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಆಧಾರವಿಲ್ಲದ ಹೇಳಿಕೆ ನೀಡುವುದು ಸೂಕ್ತವಲ್ಲ”ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ, ಮಾಜಿ ಕೇಂದ್ರ ಸಚಿವ ಬಿ. ಜನಾರ್ಧನ ಪೂಜಾರಿಯವರು ಧರ್ಮಸ್ಥಳದ ಬೆಳವಣಿಗೆಯನ್ನು ಉಲ್ಲೇಖಿಸುವಾಗ ಕ್ರೈಸ್ತರ ಸ್ಮಶಾನ ಭೂಮಿಯನ್ನು ಎಳೆದು ತಂದು ಮಾತನಾಡಿರುವುದನ್ನು ಕ್ರೈಸ್ತ ಸಮುದಾಯ ಬೇಸರದಿಂದ ಸ್ವೀಕರಿಸಿದೆ. “ಕ್ರೈಸ್ತರ ದಫನ ಭೂಮಿಯಲ್ಲಿ ಅನಾಥ ಶವಗಳನ್ನು ಹೂಳುವುದಿಲ್ಲ. ಪ್ರತಿಯೊಂದು ಮೃತದೇಹಕ್ಕೂ ಸರಿಯಾದ ದಾಖಲೆ ಇರುತ್ತದೆ. ಚರ್ಚ್ ಸದಸ್ಯರ ಮೃತದೇಹಗಳನ್ನು ಮಾತ್ರ ದಫನ ಮಾಡಲಾಗುತ್ತದೆ. ಚರ್ಚ್ ಗಳ ಸ್ಮಶಾನದಲ್ಲಿ ಸಂಬಂಧಪಟ್ಟ ಚರ್ಚ್ ಗಳ ಸದಸ್ಯರ ಮೃತ ದೇಹಗಳನ್ನು ಮಾತ್ರ ಹೂಳಲಾಗುತ್ತಿದೆ. ಬೇರೊಂದು ಚರ್ಚಿನ ಸದಸ್ಯರ ಮೃತ ದೇಹವನ್ನು ಕೂಡಾ ದಫನ ಮಾಡುವುದಿಲ್ಲ.” ಎಂದು ಅವರು ಸ್ಪಷ್ಟವಾಗಿ ತಿಳಿಸಿದರು.

ಕ್ರೈಸ್ತರ ದಫನ ಕ್ರಮ ಬಹಳಷ್ಟು ಶತಕಗಳಿಂದ ನಿಯಮಿತವಾಗಿ, ಪಾವಿತ್ರ್ಯದಿಂದ ನಡೆಯುತ್ತಿದ್ದು, ಇದನ್ನು ಗುರಿಯಿಲ್ಲದೆ ವಿವಾದಕ್ಕೆ ಎಳೆದು ತರುವುದು ಸರಿಯಲ್ಲ ಎಂದು ಧರ್ಮಕ್ಷೇತ್ರದ ನಾಯಕರು ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಒತ್ತಿ ಹೇಳಿದ್ದಾರೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page