May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ICYM ಕೊಲ್ಲಂಗಾನ ಘಟಕದಿಂದ ಸೂಚಕ ಫಲಕ ಶುದ್ಧೀಕರಣ ಕಾರ್ಯ

ಭಾರತೀಯ ಕಥೊಲಿಕ್ ಯುವ ಸಂಚಾಲನ (ICYM) ಕೊಲ್ಲಂಗಾನ ಘಟಕ ಇದರ ವತಿಯಿಂದ ಆಗಸ್ಟ್ 17ರಂದು ಭಾನುವಾರ ಬೆಳಿಗ್ಗೆ ಬಿ.ಸಿ. ರೋಡ್ ಕಲೆಕ್ಟರೇಟ್‌ನಿಂದ ಮಾನ್ಯವರೆಗೆ ಸೂಚಕ ಫಲಕ ಶುಚಿಗೊಳಿಸುವ ಕಾರ್ಯಕ್ರಮ ನಡೆಯಿತು. ಸುಮಾರು 20 ಮಂದಿ ಸದಸ್ಯರು ಪಾಲ್ಗೊಂಡ ಈ ಕಾರ್ಯದಲ್ಲಿ ಹಾಳಾಗಿದ್ದ ಫಲಕಗಳನ್ನು ದುರಸ್ತಿ ಮಾಡಿ, ರಸ್ತೆಯ ಬದಿಯ ಸೂಚಕ ಫಲಕಗಳನ್ನು ಸ್ವಚ್ಛಗೊಳಿಸಲಾಯಿತು.

ಕೊಲ್ಲಂಗಾನ ಸಂತ ತೋಮಸ್ ಚರ್ಚ್ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದ ಆರಂಭದಲ್ಲಿ ಚರ್ಚ್ ಧರ್ಮಗುರು ವಂದನೀಯ ಫಾದರ್ ರಿತೇಶ್ ರೊಡ್ರಿಗಸ್ ಎಲ್ಲರನ್ನೂ ಸ್ವಾಗತಿಸಿ ಸುಚಿತ್ವ ಕಾರ್ಯಕ್ರಮವನ್ನು ಕೈಗೊಂಡ ICYM ಕೊಲ್ಲಂಗಾನ ಘಟಕದ ಅಧ್ಯಕ್ಷ ಹಾಗೂ ಎಲ್ಲಾ ಸದಸ್ಯರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಚರ್ಚ್ ನ ಪಾಲನಾ ಸಮಿತಿಯ ಕಾರ್ಯದರ್ಶಿ ಸುನಿಲ್ ಡಿಸೋಜ ಧನ್ಯವಾದಗಳನ್ನು ಸಲ್ಲಿಸಿದರು. ಈ ಸ್ವಚ್ಛತಾ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page