August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಿಯಮ ಪಾಲಿಸದೇ ಅಕ್ರಮವಾಗಿ ನಿರ್ಮಿಸಿರುವ ಕಟ್ಟಡಗಳನ್ನು ಮುಲಾಜಿಲ್ಲದೆ ಒಡೆದು ಹಾಕಲಾಗುತ್ತದೆ – ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್

ಸುರಕ್ಷಿತ ನಿಯಮಗಳನ್ನು ಪಾಲಿಸದೇ ಅಕ್ರಮವಾಗಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ದುರಸ್ತಿ ಮಾಡಿಕೊಳ್ಳಬೇಕು. ಇಲ್ಲವಾದರೆ ಮುಲಾಜಿಲ್ಲದೆ ಒಡೆದು ಹಾಕುತ್ತೇವೆ ಎಂದು ನಗರಾಭಿವೃದ್ಧಿ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ನಗರ್ತಪೇಟೆಯಲ್ಲಿ ಅಗ್ನಿ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಶೇಕಡಾ 70 ರಷ್ಟು ಕಟ್ಟಡಗಳ ನಿರ್ಮಾಣ ಅಕ್ರಮವಾಗಿದೆ. ಹಳೆಯ ಬಡಾವಣೆಗಳಷ್ಟೇ ಅಲ್ಲ, ಹೊಸ ಬಿಡಿಎ ಬಡಾವಣೆಗಳಲ್ಲೂ ಒಂದು ಮತ್ತು ನಾಲ್ಕು ಮಹಡಿಗಳನ್ನು ನಿರ್ಮಿಸುತ್ತಿದ್ದಾರೆ ಎಂದು ಆಕ್ಷೇಪಿಸಿದರು.


ಸ್ವಾಧೀನ ಪತ್ರ ಇಲ್ಲದೆ ಇರುವವರಿಗೆ ನೀರು ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಅದರ ಪ್ರಕಾರ 4 ಲಕ್ಷ ಸಂಪರ್ಕಗಳನ್ನು ಸ್ಥಗಿತಗೊಳಿಸಲಾಗಿದೆ. 30-40 ಅಡಿ ವಿಸ್ತೀರ್ಣದ ನಿವೇಶನದಲ್ಲಿ ಎರಡು ಮಹಡಿಗಳ ನಿರ್ಮಾಣಕ್ಕೆ ವಿನಾಯಿತಿ ನೀಡಬೇಕೆಂಬ ಚಿಂತನೆ ಇದೆ. ಸಚಿವ ಸಂಪುಟದಲ್ಲಿ ಇತರ ಸಚಿವರು ಯಾವ ರೀತಿಯ ಅಭಿಪ್ರಾಯ ವ್ಯಕ್ತ ಪಡಿಸುತ್ತಾರೆ ಎಂಬುದನ್ನು ಗಮನಿಸಿ ನಂತರ ನಾನು ಮತ್ತು ಮುಖ್ಯಮಂತ್ರಿಗಳು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page