September 20, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಳ್ತಂಗಡಿಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

ಬೆಳ್ತಂಗಡಿ ತಾಲೂಕಿನ ಬಜಿರೆ, ನಿಟ್ಟಿಡೆ ಮತ್ತು ಪಡ್ಡಂದಡ್ಕ ಕ್ಲಸ್ಟರ್‌ಗಳ ವಲಯ ಮಟ್ಟದ ಕಬಡ್ಡಿ ಪಂದ್ಯಾಟವು ಆಗಸ್ಟ್ 20ರಂದು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕರಿಮಣೇಲು ಇಲ್ಲಿ ವಿಜೃಂಭಣೆಯಿಂದ ಜರಗಿತು. ಕಾರ್ಯಕ್ರಮವನ್ನು ವೇಣೂರು ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಕಾಶಿನಾಥ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಎಲ್.ಜೆ. ಫೆರ್ನಾಂಡಿಸ್ ವಹಿಸಿದರು.

ಸಮೂಹ ಸಂಪನ್ಮೂಲ ವ್ಯಕ್ತಿ ಆರತಿ, ನೋಡ್‌ಲ್ ಅಧಿಕಾರಿ ಪುಷ್ಪ, ಶಿಕ್ಷಕರ ಸಂಘದ ಕೋಶಾಧಿಕಾರಿ ರಾಜೇಶ್ ಕಾರ್ಯಕ್ರಮದಲ್ಲಿ ಹಾಜರಿದ್ದರು. ಶಾಲೆಯ ಮುಖ್ಯ ಶಿಕ್ಷಕಿ ಮಾರ್ಸೆಲಿನ್ ಅತಿಥಿಗಳನ್ನು ಸ್ವಾಗತಿಸಿದರು. ಸುಪ್ರೀತಾ ವಂದಿಸಿದರು. ಶಿಕ್ಷಕಿ ಮೀನಾ ಮೋನಿಸ್ ಕಾರ್ಯಕ್ರಮವನ್ನು ನಿರ್ವಹಿಸಿದರು.

You may also like

News

ಸಾಣೂರು ಜಂಕ್ಷನ್‌ನಲ್ಲಿ ಮಾಜಿ ಸಚಿವ ರಮಾನಾಥ ರೈ ಕಾರಿಗೆ ಬಸ್ ಡಿಕ್ಕಿ – ಹಲವರಿಗೆ ಗಾಯ

ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಘಟನೆ ಇಂದು ಸೆಪ್ಟೆಂಬರ್ 20ರಂದು ಭಾನುವಾರ ಕಾರ್ಕಳ–ಮೂಡುಬಿದಿರೆ
News

ಬಂಟ್ವಾಳ ಲೋಕ ಅದಾಲತ್ – 12,400 ಪ್ರಕರಣ ಇತ್ಯರ್ಥ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಬಂಟ್ವಾಳದ ಬಿ.ಸಿ. ರೋಡ್ ನ್ಯಾಯಾಲಯದಲ್ಲಿ ಸೆಪ್ಟೆಂಬರ್ 19ರಂದು ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 13,223 ಪ್ರಕರಣಗಳನ್ನು ಪರಿಗಣಿಸಿ,

You cannot copy content of this page