September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಫೋನ್ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಗೊಳಿಸುವುದಾಗಿ ಬೆದರಿಕೆ – ಆರೋಪಿಯ ಬಂಧನ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಸ್ಟ್ 29ರಂದು ಮಂಗಳವಾರ ರಾತ್ರಿ ಅನಾಮಿಕ ವ್ಯಕ್ತಿ ಫೋನ್ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್ ಅನ್ನು ಖಾಲಿ ಮಾಡಬೇಕು ಇಲ್ಲವಾದರೆ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಈ ಬಗ್ಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಡ್ಯೂಟಿ ಟರ್ಮಿನಲ್ ಮ್ಯಾನೇಜರ್ ರವರು ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆದರಿಕೆ ಕರೆ ಮಾಡಿದವನು ತಮಿಳುನಾಡು ರಾಜ್ಯದ ವೆಲ್ಲೂರು ಜಿಲ್ಲೆಯ ನಿವಾಸಿ 38 ವರ್ಷ ಪ್ರಾಯದ ಶಶಿಕುಮಾರ್ ಎಂದು ತಿಳಿದುಬಂದಿದ್ದು ಆತನನ್ನು ತಮಿಳುನಾಡಿನ ವೆಲ್ಲೂರ್ ನಲ್ಲಿ ವಶ ಪಡೆಯಲಾಗಿದೆ. ಈತನ ಮೇಲೆ ಮೊ.ನಂ 156/2025 ಕಲಂ:- 351(2), 351(3) BNS U/s:- 3(1)d Suppression of unlawful acts against safety of civil aviation act 1982 ಪ್ರಕರಣ ದಾಖಲಿಸಿಕೊಂಡು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಆರೋಪಿಯನ್ನು ವಿಚಾರಣೆ ನಡೆಸಿದಾಗ ಈತನು ದೇಶದ ಎಲ್ಲಾ ವಿಮಾನ ನಿಲ್ದಾಣಗಳ ಮೊಬೈಲ್ ನಂಬ್ರವನ್ನು ಸಾಮಾಜಿಕ ಜಾಲತನದಲ್ಲಿ ಸರ್ಚ್ ಮಾಡಿ ಕರೆ ಮಾಡಿ ಬೆದರಿಕೆ ಹಾಕಿದ್ದು, ಅದೇ ತರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾನಕ್ಕೂ ಸಹ ಫೋನ್ ಮಾಡಿ ಟರ್ಮಿನಲ್ ಬಿಲ್ಡಿಂಗ್ ಅನ್ನು ಖಾಲಿ ಮಾಡಲು ತಿಳಿಸಿ ಖಾಲಿ ಮಾಡದೆ ಹೋದರೆ ಟರ್ಮಿನಲ್ ಬಿಲ್ಡಿಂಗ್ ಅನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ತಿಳಿಸಿರುತ್ತಾನೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ತಿಳಿದುಬಂದಿದೆ.

You may also like

News

32 ವರ್ಷಗಳ ಜನಸೇವೆ ಸಾರ್ಥಕ – ಗ್ರೆಟ್ಟಾ ಮಸ್ಕರೇನಸ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

ಕಂದಾಯ ಇಲಾಖೆಯಲ್ಲಿ ಸುದೀರ್ಘ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಗ್ರಾಮ ಆಡಳಿತಾಧಿಕಾರಿ ಗ್ರೆಟ್ಟಾ ಐರಿನ್ ಮಸ್ಕರೇನಸ್ ಅವರಿಗೆ ತಾಲೂಕು ಆಡಳಿತ ಸೌಧದಲ್ಲಿ ಆತ್ಮೀಯ
News

ಸೆಪ್ಟೆಂಬರ್ 8ರ ಮೊಂತಿ ಫೆಸ್ಟ್‌ಗೆ ಕರಾವಳಿ-ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲು ಕ್ರಿಶ್ಚಿಯನ್ಸ್ ಯೂನಿಯನ್ ಪುತ್ತೂರು ಆಗ್ರಹ

MLC ಐವನ್ ಡಿಸೋಜ ಅವರಿಗೆ ವಿಧಾನ ಪರಿಷತ್ ಮುಖ್ಯ ಸಚೇತಕ ಹುದ್ದೆ ನೀಡುವಂತೆಯೂ ಮೌರಿಸ್ ಮಸ್ಕರೇನ್ಹಸ್ ಒತ್ತಾಯ ಪುತ್ತೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕ್ರೈಸ್ತ ಸಮುದಾಯದ

You cannot copy content of this page