August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಷ್ಟ್ರ ಮಟ್ಟದ ಮಿಸ್ & ಮಿಸೆಸ್ ಇಂಡಿಯಾ ಅಸ್ಟ್ರಲ್ ಸ್ಪರ್ಧೆಯಲ್ಲಿ ಮಂಗಳೂರಿಗರ ಮೆರುಗು

ಎಲ್ಲಾ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಮಂಗಳೂರಿಗರಿಗೆ ಹೆಮ್ಮೆ ತಂದ ಪ್ರತಿಭೆಗಳು

ರಾಷ್ಟ್ರೀಯ ಮಿಸ್ & ಮಿಸೆಸ್ ಇಂಡಿಯಾ ಅಸ್ಟ್ರಲ್ ಪೇಜೆಂಟ್ಸ್‌ 2025ರ 9ನೇ ಆವೃತ್ತಿಯ ಗ್ಯ್ರಾಂಡ್‌ ಫಿನಾಲೆ ಬೆಂಗಳೂರಿನಲ್ಲಿ ಇತ್ತೀಚೆಗೆ ಅದ್ಧೂರಿಯಾಗಿ ಜರಗಿದ್ದು, ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಮಂಗಳೂರಿನ ವನಿತೆಯರು, ಯುವತಿಯರು ಹಾಗೂ ಮಕ್ಕಳು ಬಹುತೇಕ ಎಲ್ಲಾ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿರುವುದು ಮಂಗಳೂರಿಗರ ಹೆಮ್ಮೆಗೆ ಕಾರಣವಾಗಿದೆ.

ಬೆಂಗಳೂರಿನ ಕಿಂಗ್ಸ್‌ ಮೆಡೋಸ್‌ನಲ್ಲಿ ನಡೆದ ಈ ಸ್ಪರ್ಧೆ ಸೆಪ್ಟೆಂಬರ್‌ 4ರಿಂದ 6ರವರೆಗೆ ಮೂರು ದಿನಗಳ ಕಾಲ ವಿವಿಧ ರೀತಿಯ ಚಟುವಟಿಕೆಗಳ ಮೂಲಕ ನಡೆದು, ಸೆಪ್ಟೆಂಬರ್  6ರ ಶನಿವಾರ ಸಂಜೆ ಗ್ರ್ಯಾಂಡ್‌ ಫಿನಾಲೆ ಆಯೋಜಿಸಲಾಯಿತು.

ಪ್ರಿ ಜೂನಿಯರ್ ವಿಭಾಗದಲ್ಲಿ ಸನ್ವಿತಾ ಡಿಸೋಜಾ ಪ್ರಿ ಜೂನಿಯರ್ ಮಿಸ್ ಇಂಡಿಯಾ ಕಿರೀಟವನ್ನು ಪಡೆದು ಮಂಗಳೂರಿಗೆ ಕೀರ್ತಿ ತಂದರು. ಪ್ರತಿಭಾ ಸೌನ್ಶಿಮಠ್ ಅವರ ನೇತೃತ್ವದಲ್ಲಿ ಆಯೋಜಿಸಲಾದ ಈ ಸೌಂದರ್ಯ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ ಮಂಗಳೂರಿನ ಸ್ಪರ್ಧಿಗಳು, ನಗರದ ಪಾತ್ ವೇ ಮಾಡೆಲಿಂಗ್‌ ಸ್ಟುಡಿಯೋ ದೀಪಕ್ ಗಂಗೂಲಿ ಅವರಿಂದ ತರಬೇತಿ ಪಡೆದವರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರೂ ಆದ ಮರ್ಸಿ ವೀಣಾ ಡಿಸೋಜಾ ಸೇರಿದಂತೆ ಹಲವಾರು ಗಣ್ಯರು ಹಾಜರಿದ್ದರು.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page