August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಚ್ಛೇದನದ ಅಂಚಿನಿಂದ ಮತ್ತೆ ಒಗ್ಗಟ್ಟಿಗೆ – ಲೋಕ ಅದಾಲತ್‌ನಲ್ಲಿ ಪುನರ್ಮಿಲನ

ಸಮಾಜದಲ್ಲಿ ಒಗ್ಗಟ್ಟು ಮತ್ತು ಮಾನವೀಯ ಮೌಲ್ಯಗಳನ್ನು ಬಲಪಡಿಸುವ ಉತ್ತಮ ಮಾದರಿ

ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಇಂದು ಸೆಪ್ಟೆಂಬರ್ 13ರಂದು ಶನಿವಾರ ನಡೆದ ಲೋಕ ಅದಾಲತ್ ಕಾರ್ಯಕ್ರಮವು ದಾಂಪತ್ಯ ಭಿನ್ನಾಭಿಪ್ರಾಯಗಳಿಂದ ವಿಚ್ಛೇದನಕ್ಕೆ ಮುಂದಾಗಿದ್ದ ಹರೀಶ್-ಶಶಿಕಲಾ ದಂಪತಿಯನ್ನು ಒಂದುಗೂಡಿಸುವಲ್ಲಿ ಯಶಸ್ವಿಯಾಯಿತು.

ವಿಚ್ಛೇದನ ಅರ್ಜಿ ಸಲ್ಲಿಸಿದ್ದ ಈ ದಂಪತಿಯನ್ನು ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರದ ಮೂಲಕ ಸಂಧಾನ ನಡೆಸಿ, ಪುನಃ ಒಟ್ಟಾಗಿ ದಾಂಪತ್ಯ ಜೀವನ ಮುಂದುವರಿಸುವಂತೆ ಮನವರಿಕೆ ಮಾಡಲಾಯಿತು. ಸಂಧಾನಕ್ಕೆ ಒಪ್ಪಿದ ದಂಪತಿಗಳು ಶನಿವಾರ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಬಸವರಾಜರವರ ಸಮಕ್ಷಮದಲ್ಲಿ ಪರಸ್ಪರ ಹಾರ ಬದಲಾಯಿಸುವ ಮೂಲಕ ಒಂದಾಗಿ, ಪ್ರಕರಣವನ್ನು ಮುಕ್ತಾಯಗೊಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ, ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು ಹಾಗೂ ನ್ಯಾಯಾವಾದಿಗಳು ಉಪಸ್ಥಿತರಿದ್ದರು. ದಾಂಪತ್ಯ ಜೀವನ ಉಳಿಸುವತ್ತ ಕೈಗೊಂಡ ಈ ಪ್ರಯತ್ನವು ಸಮಾಜದಲ್ಲಿ ಒಗ್ಗಟ್ಟು ಮತ್ತು ಮಾನವೀಯ ಮೌಲ್ಯಗಳನ್ನು ಬಲಪಡಿಸುವ ಉತ್ತಮ ಮಾದರಿಯಾಗಿದೆ.

ಇಂತಹ ಸಂಧಾನವು ದಾಂಪತ್ಯ ಜೀವನವನ್ನು ಉಳಿಸುವುದಲ್ಲದೆ ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ನೀಡುತ್ತದೆ. ಇಂದಿನ ವೇಗದ ಜೀವನದಲ್ಲಿ ಸಣ್ಣ ವಿಷಯಗಳಿಗಾಗಿ ದಂಪತಿಗಳು ಬೇರ್ಪಡುವ ಪರಿಸ್ಥಿತಿ ಹೆಚ್ಚುತ್ತಿರುವ ಸಂದರ್ಭದಲ್ಲಿ, ಇಂತಹ ಪರಿಹಾರಗಳು ಶಾಂತಿ ಮತ್ತು ಸ್ಥಿರತೆಯನ್ನು ತರಲು ಸಹಾಯ ಮಾಡುತ್ತವೆ. ಕುಟುಂಬಗಳು ಒಗ್ಗಟ್ಟಿನಿಂದ ಇರಲು ಸಾಧ್ಯವಾದರೆ ಮಕ್ಕಳ ಭವಿಷ್ಯವು ಸುರಕ್ಷಿತವಾಗುತ್ತದೆ. ಒಟ್ಟಿನಲ್ಲಿ ಇಂತಹ ಸಂಧಾನವು ಆಧುನಿಕ ಸಮಾಜದಲ್ಲಿ ಮಾನವೀಯತೆ, ಸಹನೆ ಮತ್ತು ಒಗ್ಗಟ್ಟಿನ ಮೌಲ್ಯಗಳನ್ನು ಬಲಪಡಿಸುತ್ತದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page