July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರ ಬಂಧನ – ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಎರುಂಬು ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 15ರಂದು ರಾತ್ರಿ ಪೆಟ್ರೋಲಿಂಗ್ ವೇಳೆ ಬಾತ್ಮಿದಾರರಿಂದ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ವಿಟ್ಲ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಈ ವೇಳೆ ಸಂಶಯಾಸ್ಪದವಾಗಿ ನಿಂತಿದ್ದ ಮೂವರನ್ನು ವಿಚಾರಿಸಿದಾಗ, ಅವರು ಗಾಂಜಾ ಮಾರಾಟ ಮಾಡಲು ಬಂದಿರುವುದು ಬಹಿರಂಗವಾಯಿತು.

ಬಂಧಿತರಾದವರು — 23 ವರ್ಷ ಪ್ರಾಯದ ಸನತ್‌ ಕುಮಾರ್‌, 23 ವರ್ಷ ಪ್ರಾಯದ ಮಹಮ್ಮದ್‌ ರಾಝಿಕ್‌ ಹಾಗೂ 23 ವರ್ಷ ಪ್ರಾಯದ ಚೇತನ್‌, ಮಂಗಳಪದವು, ವಿಟ್ಲ ಕಸಬಾ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ 6.27 ಗ್ರಾಂ ಗಾಂಜಾ, ಮೂರು ಮೊಬೈಲ್‌ ಫೋನ್‌ಗಳು, ಒಂದು ಸಣ್ಣ ಚೂರಿ ಹಾಗೂ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ವಿಟ್ಲ ಠಾಣೆಯಲ್ಲಿ ಅಕ್ರ.126/2025, ಕಲಂ 8(b), 20(b)(ii)(A) NDPS Act ಮತ್ತು 3(5) BNS 2023ರಂತೆ ಪ್ರಕರಣ ದಾಖಲಿಸಲಾಗಿದೆ. ತನಿಖೆ ಮುಂದುವರಿಸಿರುವ ಪೊಲೀಸರು ಮತ್ತೊಬ್ಬ ಆರೋಪಿಯಾದ 23 ವರ್ಷ ಪ್ರಾಯದ ಧ್ಯಾನ್ ಕರ್ಕೆರ, ಎರ್ಮೆ ಮಜಲು ನಿವಾಸಿಯನ್ನು ಸಹ ವಶಕ್ಕೆ ಪಡೆದಿದ್ದಾರೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page