August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರ ಬಂಧನ – ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಎರುಂಬು ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 15ರಂದು ರಾತ್ರಿ ಪೆಟ್ರೋಲಿಂಗ್ ವೇಳೆ ಬಾತ್ಮಿದಾರರಿಂದ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ವಿಟ್ಲ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಈ ವೇಳೆ ಸಂಶಯಾಸ್ಪದವಾಗಿ ನಿಂತಿದ್ದ ಮೂವರನ್ನು ವಿಚಾರಿಸಿದಾಗ, ಅವರು ಗಾಂಜಾ ಮಾರಾಟ ಮಾಡಲು ಬಂದಿರುವುದು ಬಹಿರಂಗವಾಯಿತು.

ಬಂಧಿತರಾದವರು — 23 ವರ್ಷ ಪ್ರಾಯದ ಸನತ್‌ ಕುಮಾರ್‌, 23 ವರ್ಷ ಪ್ರಾಯದ ಮಹಮ್ಮದ್‌ ರಾಝಿಕ್‌ ಹಾಗೂ 23 ವರ್ಷ ಪ್ರಾಯದ ಚೇತನ್‌, ಮಂಗಳಪದವು, ವಿಟ್ಲ ಕಸಬಾ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ 6.27 ಗ್ರಾಂ ಗಾಂಜಾ, ಮೂರು ಮೊಬೈಲ್‌ ಫೋನ್‌ಗಳು, ಒಂದು ಸಣ್ಣ ಚೂರಿ ಹಾಗೂ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ವಿಟ್ಲ ಠಾಣೆಯಲ್ಲಿ ಅಕ್ರ.126/2025, ಕಲಂ 8(b), 20(b)(ii)(A) NDPS Act ಮತ್ತು 3(5) BNS 2023ರಂತೆ ಪ್ರಕರಣ ದಾಖಲಿಸಲಾಗಿದೆ. ತನಿಖೆ ಮುಂದುವರಿಸಿರುವ ಪೊಲೀಸರು ಮತ್ತೊಬ್ಬ ಆರೋಪಿಯಾದ 23 ವರ್ಷ ಪ್ರಾಯದ ಧ್ಯಾನ್ ಕರ್ಕೆರ, ಎರ್ಮೆ ಮಜಲು ನಿವಾಸಿಯನ್ನು ಸಹ ವಶಕ್ಕೆ ಪಡೆದಿದ್ದಾರೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page