July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಮೂರನೇ ಅವಧಿಗೆ ಅಧ್ಯಕ್ಷರಾಗಿ ಕೆ.ಯು. ಇಬ್ರಾಹಿಂ, ಕಾರ್ಯದರ್ಶಿಯಾಗಿ ಜೆ.ಹೆಚ್. ಅಬೂಬಕ್ಕರ್  ಸಿದ್ದೀಕ್

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ‌ ದರ್ಗಾ ಶರೀಫ್ ಕಾಜೂರು ಇದರ 2025-28 ಸಾಲಿನ ಅದ್ಯಕ್ಷರಾಗಿ ಕೆ.ಯು. ಇಬ್ರಾಹಿಂ, ಉಪಾದ್ಯಕ್ಷರಾಗಿ ಮುಹಮ್ಮದ್ ಬಶೀರ್ ಅಹ್ಸನಿ, ಪ್ರಧಾನ ಕಾರ್ಯದರ್ಶಿಯಾಗಿ ಜೆ.ಹೆಚ್. ಅಬೂಬಕ್ಕರ್ ಸಿದ್ದೀಕ್ ಹಾಗೂ ಕೋಶಾಧಿಕಾರಿಯಾಗಿ ಡಿ.ವೈ. ಉಮರ್ ಕುಕ್ಕಾವು ಇವರು ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ನಿರ್ದೇಶಕರುಗಳಾಗಿ ಅಬ್ದುಲ್ ಸಲೀಂ, ಕೆ.ಯು. ಹನೀಫ್, ಬದ್ರುದ್ದೀನ್ ಹೆಚ್., ಅಬ್ದುಲ್ ಹಕೀಂ ಕೆ.ಕೆ., ಕೆ.ಯು. ಮುಹಮ್ಮದ್ ಸಖಾಫಿ, ಶರೀಫ್ ಸ‌ಅದಿ ಮತ್ತು ಯಾಕೂಬ್ ಎನ್. ಎಂ. ನಿರ್ದೇಶಕರುಗಳಾಗಿ ಆಯ್ಕೆಯಾಗಿದ್ದಾರೆ. ವಕ್ಫ್ ನಿಯಮಾವಳಿಯಂತೆ ಇತ್ತೀಚೆಗೆ ಮತದಾನದ ಮೂಲಕ 11 ಮಂದಿಯ ಆಯ್ಕೆ ನಡೆದಿತ್ತು. ಚುನಾಯಿತ ಪ್ರತಿನಿಧಿಗಳು ಸೆಪ್ಟೆಂಬರ್ 17ರಂದು ಬುಧವಾರ ಸಭೆ ಸೇರಿ ನೂತನ ಪದಾಧಿಕಾರಿಗಳನ್ನು ಆಯ್ಕೆಗೊಳಿಸಿದರು. ಅಧ್ಯಕ್ಷತೆಗೆ ನಡೆದ ಗುಪ್ತ ಮತದಾನದಲ್ಲಿ ಬಶೀರ್ ಅಹ್ಸನಿ ಮತ್ತು ಕೆ.ಯು. ಇಬ್ರಾಹಿಂರವರು ಸ್ಪರ್ಧಿಸಿ ಮತದಾನದ ವೇಳೆ ಕೆ.ಯು. ಇಬ್ರಾಹಿಂ ಅವರು 6 ಮತಗಳು ಮತ್ತು ಬಶೀರ್ ಅಹ್ಸನಿ ಅವರು 5 ಮತಗಳನ್ನು ಪಡೆದರು.

ಸಯ್ಯಿದ್ ಕಾಜೂರು ತಂಙಳ್ ರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಚುನಾವಣಾ ವೀಕ್ಷಕರಾಗಿ ಮತ್ತು ಚುನಾವಣಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕ್ಕರ್ ಹಾಜಿ ಮಂಗಳೂರು ಸಬೆ ನಡೆಸಿಕೊಟ್ಟರು.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page