August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಜ್ಯ ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ – ವಾಮಂಜೂರಿನ ಸೈಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಮಹಿಳಾ ತಂಡ ಚಾಂಪಿಯನ್

ವಾಮಂಜೂರಿನ ಸೈಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಮಹಿಳಾ ಶಟ್ಲ್ ಬ್ಯಾಡ್ಮಿಂಟನ್ ತಂಡವು ಸಪ್ಟೆಂಬರ್ 11 ಮತ್ತು 12 ರಂದು ಮಂಡ್ಯದ ಪಿ.ಎಸ್.ಸಿ.ಇ. ನಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿಜೇತರ ಟ್ರೋಫಿಯನ್ನು ಪಡೆದುಕೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿತು.

 

ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ತೃತೀಯ ವರ್ಷದ ಟ್ರಿವಿಯಾ ಕ್ರೆಡಾ ವೇಗಸ್ ರವರಿಗೆ ಪಂದ್ಯಾವಳಿಯ ಅತ್ಯುತ್ತಮ ಮಹಿಳಾ ಆಟಗಾರ್ತಿ ಪ್ರಶಸ್ತಿ ದೊರಕಿತು. ಕ್ರೀಡಾ ಶಿಕ್ಷಣ ನಿರ್ದೇಶಕಿ (ಪಿಇಡಿ) ವನೀಶಾ ವಿ. ರೊಡ್ರಿಗಸ್ ಮತ್ತು ಸಹಾಯಕ ಪಿಇಡಿ ಸುಧೀರ್ ರವರ ಮಾರ್ಗದರ್ಶನದಲ್ಲಿ ತಂಡಗಳು ಶ್ರೇಷ್ಠ ಕೌಶಲ್ಯವನ್ನು ಪ್ರದರ್ಶಿಸಿದವು. ವಿಜೇತ ತಂಡವು ಟ್ರಿವಿಯಾ ಕ್ರೆಡಾ ವೇಗಸ್, ತ್ರಿಶಾ ಕ್ಲಾರಿಸ್ ವೇಗಸ್, ಕ್ರಿಸ್ಟಲ್ ಡ್ಯಾಪ್ನಿ ಮೊಂತೇರೊ ಸೇರಿದಂತೆ ಅನೇಕ ವಿಭಾಗಗಳ ಪ್ರತಿಭಾನ್ವಿತ ಆಟಗಾರರನ್ನು ಒಳಗೊಂಡಿತ್ತು.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page