August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಷ್ಟ್ರಮಟ್ಟದ  ಅಥ್ಲೆಟಿಕ್ಸ್ ನಲ್ಲಿ ಮಿಂಚಿದ ‘ಯುವರಾಜ’ ನಿಗೆ  ಅಭೂತಪೂರ್ವ ಸನ್ಮಾನ

ಮಂಗಳೂರಿನ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಯುವರಾಜ್ ಕುಂದರ್ ರವರು ವಾರಣಾಸಿಯ ಸಂತ ಅತುಲನಂದ್ ಕಾನ್ವೆಂಟ್ ಶಾಲೆಯಲ್ಲಿ  ಇತ್ತೀಚಿಗೆ  ನಡೆದ ರಾಷ್ಟ್ರಮಟ್ಟದ ಸಿಬಿಎಸ್ಇ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ 200 ಮೀಟರ್ ಓಟದಲ್ಲಿ ಚಿನ್ನದ ಪದಕ ಹಾಗೂ 400 ಮೀಟರ್ ಓಟದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಶಾಲೆಗೆ ಹೆಮ್ಮೆಯನ್ನು ತಂದುಕೊಟ್ಟಿದ್ದಾರೆ.

ನಾಲ್ಕೂವರೆ ವಯಸ್ಸಿನಲ್ಲಿ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ ಯುವರಾಜ್ ರವರ ಕಠಿಣ ಅಭ್ಯಾಸದಿಂದ ಅವರಿಗೆ ಈವರೆಗೆ ಒಟ್ಟು 37 ಚಿನ್ನ, 13 ಬೆಳ್ಳಿ ಮತ್ತು 5 ಕಂಚಿನ ಪದಕಗಳನ್ನು ತಂದುಕೊಟ್ಟಿದೆ. ಅಲ್ಲದೆ ಯುವರಾಜ್ ರವರು ಇದೇ ಬರುವ ಡಿಸೆಂಬರ್ ನಲ್ಲಿ ಮಧ್ಯಪ್ರದೇಶದಲ್ಲಿ ನಡೆಯಲಿರುವ SGFI ರಾಷ್ಟೀಯ ಪಂದ್ಯಾವಳಿಗೆ ಆಯ್ಕೆಯಾಗಿರುವುದು ಹೊಸ ಮೈಲಿಗಲ್ಲನ್ನು ಸೂಚಿಸುತ್ತದೆ.

ಅವರ ಈ ಸಾಧನೆಯನ್ನು ಗುರುತಿಸಿ ಅವರನ್ನು ಮತ್ತು ಅವರ ಪೋಷಕರಾದ ಧೀರಜ್ ಕೋಟ್ಯಾನ್ ಮತ್ತು ವೀಣಾ ಡಿ. ಕೋಟ್ಯಾನ್ ರವರನ್ನು ಶಾಲೆಯಲ್ಲಿ  ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಲಾ ಪ್ರಾಂಶುಪಾಲರಾದ ವಂದನೀಯ ಫಾದರ್ ರೋಹನ್ ಡಿ. ಅಲ್ಮೇಡಾ ಎಸ್. ಜೆ.ರವರು, ವಿದ್ಯಾರ್ಥಿಗಳು ತಮ್ಮ ಗುರಿ ಮುಟ್ಟಲು ಅಗತ್ಯವಾದ ಪ್ರಯತ್ನಗಳನ್ನು ಮಾಡುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಉಪ ಪ್ರಾಂಶುಪಾಲರಾದ ಲಾರೆಲ್ ಡಿಸೋಜ ಹಾಗೂ ಅಪರ್ಣಾ ಸುರೇಶ್  ಉಪಸ್ಥಿತರಿದ್ದರು.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page