May 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವೈದ್ಯಕೀಯದಲ್ಲಿ ಕಲಿಕೆಗೆ ಬಿಡುವಿಲ್ಲ – ಕಣಚೂರು ಹಾಜಿ ಡಾ. ಮೋನು

ಸ್ಥಳೀಯ ನಾಟೇಕಲ್ಲಿನ ಕಣಚೂರು ಆಯುರ್ವೇದ ಕಾಲೇಜು ಆಸ್ಪತ್ರೆ ಗಳ ಆಯುರ್ವೇದ ಸಪ್ತಾಹದ ಅಂಗವಾಗಿ ಸೆಪ್ಟೆಂಬರ್ 26ರ ಶುಕ್ರವಾರ ವೈದ್ಯರಿಗಾಗಿ ವೈದ್ಯಕೀಯ ಉಪನ್ಯಾಸವು ನಡೆಯಿತು. ಆಯುರ್ವೇದದಲ್ಲಿ ತುರ್ತು ಚಿಕಿತ್ಸೆಯ ಕುರಿತಾಗಿ ಪುತ್ತೂರಿನ ಸುಶೃತ ಆಸ್ಪತ್ರೆಯ ಡಾ. ರವಿಶಂಕರ ಪೆರುವಾಜೆಯವರು ಸುದೀರ್ಘವಾಗಿ ತುರ್ತು ನಿರ್ವಹಣೆಯ ಕುರಿತಾಗಿ ಸಚಿತ್ರ ಮಾಹಿತಿ ನೀಡಿದರು.

ಇದೇ ವೇಳೆ ಮಣಿಪಾಲ ವಾಸ್ತವ್ಯದ ಉಡುಪಿ ಆಯುರ್ವೇದ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಶಾರೀರ ರಚನಾ ಶಾಸ್ತ್ರದ ನಿಪುಣ ಡಾ. ಗಿರಿಧರ ಕಂಠಿ ಇವರನ್ನು ಹೂ ಹಾರ ಫಲ ಪುಷ್ಪ ಪೇಟ ಸಹಿತವಾಗಿ ಸನ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಡಾ. ಹಾಜಿ ಮೋನುರವರು ದೀಪ ಬೆಳಗಿ ಉದ್ಘಾಟಿಸಿ, ವೈದ್ಯಕೀಯ ಕಲಿಕೆಯ ಮಹತ್ವ ಹಾಗೂ ಭಾರತೀಯ ವೈದ್ಯಪದ್ಧತಿಯ ಉಪಯೋಗ ಸಾರ್ವತ್ರಿಕವಾಗಲು ನುರಿತವರ ಭೋದನೆಗಳು ಸಹಾಯಕ ಎಂದರು.

ಸಂಸ್ಥೆಯ ನಿರ್ದೇಶಕ ಅಬ್ದುಲ್ ರೆಹಿಮಾನ್ ರವರು ಸಂಸ್ಥೆಯ ಸದುದ್ದೇಶಗಳನ್ನು ವಿವರಿಸುತ್ತ ಎಲ್ಲಾ ರೀತಿಯ ಚಿಕಿತ್ಸೆ ನಮ್ಮಲ್ಲೂ ಲಭ್ಯವಿದ್ದು ನುರಿತ ಚಿಕಿತ್ಸಕರು ನಮ್ಮಲ್ಲಿರುವ ಕಾರಣ ಉತ್ತಮ ಬೆಳವಣಿಗೆ ಸಾಧ್ಯ ಎಂದರು.

ಪ್ರಾಚಾರ್ಯೆ ಡಾ. ವಿದ್ಯಾ ಪ್ರಭಾ ಸ್ವಾಗತಿಸಿದರು. ಸಂಸ್ಥೆಯ ನಿರ್ವಾಹಕ ಡಾ. ಸುರೇಶ ನೆಗಳಗುಳಿಯವರು ಪೆರುವಾಜೆಯವರ ಪ್ರತಿಭೆಯನ್ನು ಹಾಗೂ ಡಾ. ಕಂಠಿಯವರ ಜ್ಞಾನವನ್ನು ಕೊಂಡಾಡಿದಾರಲ್ಲದೆ ಪ್ರತಿ ತಿಂಗಳೂ ನುರಿತ ವೈದ್ಯರಿಂದ ಉಪನ್ಯಾಸ ಏರ್ಪಡಿಸುವ ಪ್ರಸ್ತಾವ ಮಾಡಿದರು. ನೆರೆಯ ಊರಿನ ವೈದ್ಯರೂ ಜಿಲ್ಲೆಯ ಕಾಲೇಜುಗಳ ವೈದ್ಯವಿದ್ಯಾರ್ಥಿಗಳೂ ಒಟ್ಟಾಗಿ ಸುಮಾರು ನಾಲ್ಕುನೂರು ಮಂದಿ ಈ ಉಪನ್ಯಾಸದ ಸದುಪಯೋಗ ಪಡೆದರು.

ಡಾ. ದೀನಮಂಜು, ಡಾ. ಅಂಜಲಿ ಶೇಖರ್ ನಿರೂಪಿಸಿದರು ಮತ್ತು ಸಮಿಯಾರವರು ಪ್ರಾರ್ಥನೆ ಮಾಡಿದರು. ಇದೇ ಕಾರ್ಯಕ್ರಮವನ್ನು ಸಾವಿರಾರು ಮಂದಿ ಜಾಲತಾಣ ಮೂಲಕವೂ ವೀಕ್ಷಿಸಿದರು.

You may also like

News

ಉಡುಪಿ ಧರ್ಮಕ್ಷೇತ್ರದ ನೂತನ ಶ್ರೇಷ್ಠ ಗುರುಗಳಾಗಿ ವಂದನೀಯ ಫಾದರ್ ಫ್ರಾನ್ಸಿಸ್ ಕ್ಸೇವಿಯರ್ ಲೂವಿಸ್ ನೇಮಕ

ಬಿಷಪ್ ಪರಮ ಪೂಜ್ಯ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರಿಂದ ಅಧಿಕಾರ ಸ್ವೀಕಾರ ಉಡುಪಿ ಧರ್ಮಕ್ಷೇತ್ರದ ನೂತನ ಬಿಷಪ್ ಪರಮ ಪೂಜ್ಯ ಅತೀ ವಂದನೀಯ ಡಾ. ಲೆಸ್ಲಿ
News

ಉಡುಪಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವಾರ್ಷಿಕ ಸಭೆ – ಸಂಘಟನೆ ಬಲವರ್ಧನೆಗೆ ಪಣ

ಉಡುಪಿ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವಾರ್ಷಿಕ ಮಹಾಸಭೆಯು ಮೇ 1ರಂದು ಶುಕ್ರವಾರ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯಶಸ್ವಿಯಾಗಿ ಜರುಗಿತು. ಜಿಲ್ಲೆಯ ಯುವ ಶಕ್ತಿಯನ್ನು ರಾಜಕೀಯವಾಗಿ

You cannot copy content of this page