May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

‘ಕಾಸ್ಕ್’  ಸಂಸ್ಥೆಯ ಮಹಾಸಭೆ ಮತ್ತು ಪುನರ್ಮಿಲನ

ಸಪ್ಟೆಂಬರ್ 21ರಂದು ಭಾನುವಾರ ಬೆಂದೂರ್ ಚರ್ಚ್ ಸಭಾಂಗಣದಲ್ಲಿ ಕಾಸ್ಕ್ ಸಂಸ್ಥೆಯ ವಾರ್ಷಿಕ ಮಹಾಸಭೆಯು ನಡೆಯಿತು. ಮಹಾಸಭೆಯ ನಂತರ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರ ಪುನರ್ಮಿಲನ ಸಮಾರಂಭವು ನೆರವೇರಿತು.

ಫ್ಲೋರಾ ಕ್ಯಾಸ್ತೆಲಿನೊ ಸಂಚಾಲನೆಯಲ್ಲಿ ಕೊಂಕಣಿ ಸಂಸ್ಕೃತಿ ಮತ್ತು ಪರಂಪರೆಯ ಅನೇಕ ಕಾರ್ಯಕ್ರಮಗಳು ನೆರವೇರಿದವು. ರೆಮೋನಾ ಇವೆಟ್ ಪಿರೇರಾ ಭರತನಾಟ್ಯವನ್ನು ಪ್ರದರ್ಶಿಸಿದರು. ಇತ್ತೀಚೆಗೆ ನಡೆದ 120 ಗಂಟೆಗಳ ಪ್ರದರ್ಶನ ಮತ್ತು ವಿಶ್ವ ದಾಖಲೆಗಾಗಿ ಅವರನ್ನು ಅಭಿನಂದಿಸಲಾಯಿತು. ಅವರ ಅಸಾಧಾರಣ ಸಾಧನೆಗಾಗಿ ಪ್ರತಿಷ್ಠಿತ ‘ಕಾಸ್ಕ್ ಮೊತಿಯಾಂ’ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

ಸಾನ್ಸಿಯಾರವರ ಕೊಂಕಣಿ ಪರಂಪರೆಯ ನುಡಿನಮನ, ಪ್ರಜ್ವಲ್ ಮತ್ತು ಶವಿಲ್ ಇವರ ‘ಗುಮಟ್’ ವಾದನ, ಮೆಲ್ವಿಟಾ ಹಾಗೂ ತಂಡದಿಂದ ದೆಖ್ಣಿ ನಾಚ್, ರೋಮಿತ್ ಹಾಗೂ ತಂಡದಿಂದ ತೊಣಿಯೊ ನಾಚ್ ನಂತಹ ಜಾನಪದ ನೃತ್ಯಗಳು ಪ್ರದರ್ಶಿಸಲ್ಪಟ್ಟವು. ಫ್ರ್ಯಾಂಕ್ಲಿನ್ ರವರ ‘ಮಾಂಡೊ’ ಗಾಯನವು ಉತ್ಸವಕ್ಕೆ ಶಾಸ್ತ್ರೀಯ ಗೋವಾ ಸೊಬಗನ್ನು ನೀಡಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿ ಪ್ರತಿಮಾರವರನ್ನು ಗೌರವಿಸಲಾಯಿತು. ಜಾನೆಟ್ ಡಿಸೋಜ ನಡೆಸಿ ಕೊಟ್ಟ ಹೌಸಿ ಹೌಸಿ ಆಟದೊಂದಿಗೆ ಉಪಾಧ್ಯಕ್ಷರಾದ ಡಾ। ರೋಹನ್ ಮೊನಿಸ್ ಕಾರ್ಯಕ್ರಮವನ್ನು ನಿರೂಪಿಸಿದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page