May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಯುವ ಸಂಗೀತ ಕಲಾರತ್ನ ರಿಷಲ್ ಮೆಲ್ಬಾ ಕ್ರಾಸ್ತಾರವರಿಗೆ ಕೊಂಕಣಿ ಗಾಯನದಲ್ಲಿ ಪ್ರಥಮ ಸ್ಥಾನ

ಕೊಂಕಣಿ ನಾಟಕ ಸಭಾ ಮಂಗಳೂರು ತಮ್ಮ 61ನೇ ಸಾಲಿನಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ ಆಯೋಜಿಸಿದ, ಕೊಂಕಣಿ ಗಾಯನ ಸ್ಪರ್ಧೆಯಲ್ಲಿ ರಿಷಲ್ ಮೆಲ್ಬಾ ಕ್ರಾಸ್ತಾರವರು 15 ರಿಂದ 45 ವಯೋಮಿತಿಯ ಸ್ತ್ರೀಯರ ಗಾಯನ ವಿಭಾಗದಲ್ಲಿ ಸತತ ಎರಡನೇ ಬಾರಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಈ ಯುವ ಕಲಾವಿದೆ ಭಾರತೀಯ ಇತರ ಭಾಷೆಗಳಲ್ಲಿಯೂ ಹಾಡಿ ಅನೇಕ ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಸಂಗೀತದ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ರಿಷಲ್, ಮುಂದೊಂದು ದಿನ ದೇಶದ ಖ್ಯಾತ ವೇದಿಕೆಯಾದ ಇಂಡಿಯನ್ ಐಡಲ್ ನಲ್ಲಿ ಭಾಗವಹಿಸುವ ಕನಸನ್ನು ಹೊಂದಿದ್ದಾರೆ.

 

 

ಕೊಂಕಣಿ ಸಂಗೀತವನ್ನು ತನ್ನ ಮೆಲುಕುಮಯ ಕಂಠದಿಂದ ಪ್ರಚಾರ ಮಾಡುತ್ತಿರುವ ರಿಷಲ್ ಮೆಲ್ಬಾ ಕ್ರಾಸ್ತಾ, ಯುವ ಕಲಾವಿದರಿಗೆ ಪ್ರೇರಣೆಯಾಗಿದ್ದು, ಭವಿಷ್ಯದಲ್ಲಿ ರಾಷ್ಟ್ರೀಯ ಮಟ್ಟದಲ್ಲೂ ಖ್ಯಾತಿಯನ್ನು ತಂದುಕೊಡುವ ಶಕ್ತಿ ಹೊಂದಿದ್ದಾರೆ. ಸಂಗೀತ ಲೋಕದಲ್ಲಿ ಅವರು ಇನ್ನಷ್ಟು ಉನ್ನತ ಶಿಖರಗಳನ್ನು ಏರಲೆಂದು ಎಲ್ಲರೂ ಹಾರೈಸುತ್ತಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page