August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾತೃ ಭಾಷೆಯು ಕೇವಲ ಸಂವಹನ ಮಾಧ್ಯಮವಲ್ಲ – ಬ್ಯಾರಿ ಬಾಷಾ ದಿನಾಚರಣೆಯಲ್ಲಿ ಉಮರ್ ಯು.ಎಚ್.

ಯಾವುದೇ ಜನ ಸಮುದಾಯದ ಮಾತೃಭಾಷೆಯು ಕೇವಲ ಸಂವಹನ ಮಾಧ್ಯಮವಲ್ಲ. ಆ ಸಮುದಾಯದ ಪರಿಪೂರ್ಣ ಬದುಕು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಉಮರ್ ಯು.ಚ್. ಅಭಿಪ್ರಾಯಪಟ್ಟರು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಹಾಗೂ ಕಲ್ಲಡ್ಕದ ಮುರಬೈಲ್ ಯೂನಿಯನ್‌ನ ಸಹಯೋಗದೊಂದಿಗೆ ಕಲ್ಲಡ್ಕ ಮ್ಯೂಸಿಯಂನಲ್ಲಿ ಅಕ್ಟೋಬರ್ 3ರಂದು ಶುಕ್ರವಾರ ಹಮ್ಮಿಕೊಂಡಿದ್ದ ಬ್ಯಾರಿ ಭಾಷಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಾತೃಭಾಷೆಯನ್ನು ಉಳಿಸಿ, ಬೆಳೆಸುವ ಕಾರ್ಯ ನಿರಂತರವಾಗಿ ನಡೆದಾಗ ಮಾತ್ರ ಆ ಸಮುದಾಯ ಜೀವಂತವಾಗಿರಲು ಸಾಧ್ಯ ಎಂದರು.

ಬ್ಯಾರಿ ಭಾಷಾ ದಿನಾಚರಣೆಯ ಭಿತ್ರಿಪತ್ರ ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಮಾತನಾಡಿ, ಭಾಷೆಯ ಬೆಳವಣಿಗೆಯಲ್ಲಿ ಹಿರಿಯ ತಲೆಮಾರಿನ ಕೊಡುಗೆ ಅನನ್ಯವಾಗಿದ್ದು, ಹಿರಿಯ ವ್ಯಕ್ತಿಗಳ ಅಂತ್ಯಕ್ರಿಯೆಯ ಜೊತೆಗೆ ನಮ್ಮ ಆಚಾರ, ವಿಚಾರ, ಸಂಸ್ಕೃತಿ ಕೂಡಾ ಅಂತ್ಯಗೊಳ್ಳುತ್ತದೆ. ಭಾಷೆಯನ್ನು ಬೆಳೆಸುವ ನಿಟ್ಟಿನಲ್ಲಿ ಪದಗಳ ಬಳಕೆ ಕೊರತೆಯಾಗದಂತೆ ಜಾಗರೂಕತೆ ವಹಿಸಬೇಕಾದ ಅಗತ್ಯವಿದೆ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬಂಟ್ವಾಳ ಬ್ಯಾರಿ ಫೌಂಡೇಶನ್ ಅಧ್ಯಕ್ಷ ಪಿ.ಎ. ರಹೀಮ್, ಬಂಟ್ವಾಳ ತಾಲೂಕು ಸಂಯುಕ್ತ ಜಮಾತ್ ಅಧ್ಯಕ್ಷ ಮುಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು, ಜಮೀಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯ ಶಿಕ್ಷಕರ ಸಂಘದ ಅಧ್ಯಕ್ಷ ಅಕ್ಬರ್ ಅಲಿ, ಲೇಖಕಿ ಡಾ. ಜುವೇರಿಯಾ ಮುಫೀದಾ, ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಲತೀಫ್ ನೇರಳಕಟ್ಟೆ ಮಾತನಾಡಿದರು.

ಕಲ್ಲಡ್ಕ ಜುಮಾ ಮಸೀದಿಯ ಅಧ್ಯಕ್ಷ ಅಬ್ದುಲ್ಲ ಹಾಜಿ ಕೋಡಿ, ಯುನೈಟೆಡ್ ಎಂಪವರ್ಮೆಂಟ್ ಅಸೋಸಿಯೇಷನ್ ರಾಜ್ಯ ಕಾರ್ಯದರ್ಶಿ ಇಮ್ತಿಯಾಝ್ ಗೋಳ್ತಮಜಲು, ಮುರಬೈಲ್ ಯೂನಿಯನ್‌ ಅಧ್ಯಕ್ಷ ಹಬೀಬ್ ಡೈಲಿ ಫ್ರೆಶ್, ಕಲ್ಲಡ್ಕ ಮ್ಯೂಸಿಯಂನ ಮುಹಮ್ಮದ್ ಯಾಸಿರ್, ಬ್ಯಾರಿ ಅಕಾಡಮಿಯ ಮಾಜಿ ಸದಸ್ಯರಾದ ಹುಸೈನ್ ಕಾಟಿಪಳ್ಳ, ಝಕರಿಯಾ ಕಲ್ಲಡ್ಕ, ಪಿ. ಮಹಮ್ಮದ್ ಪಾಣೆಮಂಗಳೂರು ಭಾಗವಹಿಸಿದ್ದರು.

ಸದಸ್ಯರಾದ ಬಿ.ಎಸ್. ಮುಹಮ್ಮದ್, ಹಮೀದ್ ಹಸನ್ ಮಾಡೂರು, ಹಾಜಿ ಯು.ಕೆ. ಹಮೀದ್ ಉಪಸ್ಥಿತರಿದ್ದರು. ಮುಹಮ್ಮದ್ ಶರೀಫ್ ನಿರ್ಮುಂಜೆ, ಅಶ್ರಫ್ ಅಪೊಲೊ ಬ್ಯಾರಿ ಗೀತೆಗಳನ್ನು ಹಾಡಿದರು. ಅಬ್ದುಲ್ ಲತೀಫ್ ಮದನಿ ಕಿರಾಅತ್ ಪಠಿಸಿದರು. ಅಕಾಡಮಿಯ ಸದಸ್ಯ ಅಬೂಬಕರ್ ಅನಿಲಕಟ್ಟೆ ಸ್ವಾಗತಿಸಿ, ಸದಸ್ಯೆ ಸಾರಾ ಅಲಿ ಪರ್ಲಡ್ಕ ವಂದಿಸಿದರು. ಸದಸ್ಯ ಯು.ಎಚ್. ಖಾಲಿದ್ ಉಜಿರೆ ಕಾರ್ಯಕ್ರಮ ನಿರೂಪಿಸಿದರು.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page