May 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲ, ಬಂಟ್ವಾಳ ಪೊಲೀಸ್ ಠಾಣಾ ಸಹಿತ 20 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಬಂಧನ

20 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಸಜಿಪ ಮೂಡ ಗ್ರಾಮದ ನಿವಾಸಿ  32 ವರ್ಷ ಪ್ರಾಯದ ವಾರೆಂಟ್ ಅಸಾಮಿ ಫಾರೂಕ್ @ ಉಮ್ಮರ್ ಫಾರೂಕ್ ಕೊನೆಗೂ ಪೊಲೀಸರ ಬಲೆಗೆ ಸಿಕ್ಕಿದ್ದಾನೆ. ಬಂಟ್ವಾಳ ತಾಲೂಕಿನ ಮದ್ವ ಪ್ರದೇಶದಲ್ಲಿ ಅಕ್ಟೋಬರ್ 15ರಂದು ಬುಧವಾರ ಬಂಧಿಸಲ್ಪಟ್ಟ ಈತನನ್ನು ಪೊಲೀಸರು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ.

ಈತನ ವಿರುದ್ಧ ಉಪ್ಪಿನಂಗಡಿ, ಕಡಬ, ವಿಟ್ಲ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಕೊಣಾಜೆ, ಬರ್ಕೆ ಮತ್ತು ಬಜಪೆ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಬಹುತೇಕವು ಮನೆ ಕಳವು, ದರೋಡೆ ಹಾಗೂ ಆಸ್ತಿ ಕಳವು ಪ್ರಕರಣಗಳಾಗಿವೆ.

ಉಪ್ಪಿನಂಗಡಿ ಠಾಣೆಯ ಅ.ಕ್ರ. 38/2020, 39/2020, 48/2012, 119/2020 ಹಾಗೂ ಕಡಬ ಠಾಣೆಯ 43 ರಿಂದ 46/2020 ರವರೆಗೆ ದಾಖಲಾಗಿರುವ ಪ್ರಕರಣಗಳಲ್ಲಿ ಈತನ ವಿರುದ್ಧ ಭಾರತೀಯ ದಂಡ ಸಂಹಿತೆಯ 457, 380, 201, 34 ಮುಂತಾದ ಕಲಂಗಳ ಅಡಿಯಲ್ಲಿ ಆರೋಪಗಳು ದಾಖಲಾಗಿವೆ.

You may also like

News

ವಾಣಿಜ್ಯ ಸಿಲಿಂಡರ್ ದರ ಏರಿಕೆ – ಕೇಂದ್ರದ ವಿರುದ್ಧ MLC ಐವನ್ ಡಿಸೋಜ ಆಕ್ರೋಶ

ರಾಜ್ಯಾದ್ಯಂತ ಪ್ರತಿಭಟನೆಯ ಎಚ್ಚರಿಕೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ₹991ಕ್ಕೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವು ಜನವಿರೋಧಿಯಾಗಿದ್ದು, ಇದನ್ನು ವಿಧಾನ ಪರಿಷತ್ ಸದಸ್ಯರಾದ ಐವನ್
News

ನೀರುಮಾರ್ಗ ಚರ್ಚ್‌ನಲ್ಲಿ ಸಂಭ್ರಮದ ‘ಸಮುದಾಯ ದಿನಾಚರಣೆ’ – ಇಂದು ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಭೋಜನ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ನೀರುಮಾರ್ಗದ ಸೈಂಟ್ ಜೋಸೆಫ್ ದಿ ವರ್ಕರ್ ಚರ್ಚ್‌ನಲ್ಲಿ ಇಂದು ‘ಸಮುದಾಯ ದಿನಾಚರಣೆ’ಯನ್ನು ಅತ್ಯಂತ ಸಡಗರದಿಂದ ಆಚರಿಸಲಾಗುತ್ತಿದೆ. ಈ ವಿಶೇಷ ದಿನದ ಅಂಗವಾಗಿ ಚರ್ಚ್

You cannot copy content of this page