July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುತ್ತೂರಿನಲ್ಲಿ ಟ್ರಾಫಿಕ್ ಪೊಲೀಸರ ಅಮಾನತು

ಪುತ್ತೂರಿನಲ್ಲಿ ನಡೆದ ಘಟನೆಯೊಂದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ, ಇಬ್ಬರು ಸಂಚಾರ ಪೊಲೀಸರು ಕರ್ತವ್ಯದಿಂದ ಅಮಾನತುಗೊಂಡಿದ್ದಾರೆ.

ಮಾಹಿತಿಯ ಪ್ರಕಾರ ನಿನ್ನೆ ಅಕ್ಟೋಬರ್ 17ರಂದು ಶುಕ್ರವಾರ ಸಂಜೆ ವೇಳೆಯಲ್ಲಿ, ಕುರಿಯ ಗ್ರಾಮದ ಆಟೋ ಚಾಲಕ ಬಶೀರ್ ಸಮವಸ್ತ್ರ ಧರಿಸಿಕೊಂಡೇ ಆಟೋ ಚಲಾಯಿಸುತ್ತಿದ್ದರು. ಆ ವೇಳೆ ಪುತ್ತೂರು ಸಂಚಾರ ಠಾಣೆಯ ಎ.ಎಸ್‌.ಐ. ಚಿದಾನಂದ ರೈ ಮತ್ತು ಸಿಪಿಸಿ 2283 ಶೈಲ ಎಂ.ಕೆ. ಅವರು ಕೈಸನ್ನೆ ಮೂಲಕ ವಾಹನ ನಿಲ್ಲಿಸಲು ಸೂಚಿಸಿದರೂ, ಚಾಲಕ ವಾಹನವನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು ಹೋದರೆಂದು ತಿಳಿದುಬಂದಿದೆ.

ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಹಿಂಬಾಲಿಸಿ ವಾಹನ ತಡೆದ ವೇಳೆ, ಚಾಲಕನೊಂದಿಗೆ ಅವಾಚ್ಯ ಶಬ್ದ ಬಳಸಿ, ಕೈಯಿಂದ ಹಲ್ಲೆ ಮಾಡಿದ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ ಹಿನ್ನೆಲೆಯಲ್ಲಿ, ವಿಚಾರಣೆ ನಡೆಸಿದ ನಂತರ ಸಂಬಂಧಿತ ಇಬ್ಬರು ಅಧಿಕಾರಿಗಳನ್ನು ತಕ್ಷಣವೇ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page