July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಕಲಿ ಚೆಕ್‌ಗಳ ಮೂಲಕ ಲಕ್ಷಾಂತರದ ಲ್ಯಾಪ್‌ಟಾಪ್ ವಂಚನೆ – ಬರ್ಕೆ ಪೊಲೀಸರಿಂದ ಫರೀದಾ ಬೇಗಂ ಬಂಧನ

ಮಂಗಳೂರು ನಗರದಲ್ಲಿ ಎಲೆಕ್ಟ್ರಾನಿಕ್ ಅಂಗಡಿಗಳಿಗೆ ಮೋಸದ ಬಲೆ ಬೀಸಿದ್ದ ಆರೋಪಿತೆ

ಮಂಗಳೂರು ನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಡೆದ ಒಟ್ಟು 9 ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ 28 ವರ್ಷ ಪ್ರಾಯದ ಫರೀದಾ ಬೇಗಂ @ ಫರೀದಾ ಎಂಬ ವಂಚಕಿಯನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಮೊಕದ್ದಮೆ ನಂಬರ್ 77/2025ರ ಪ್ರಕರಣದಲ್ಲಿ, ಪಿರ್ಯಾದಿದಾರರಾದ ಜಯರಾಯರವರು ಮಂಗಳೂರು ನಗರದ ಎಂಪೈರ್ ಮಾಲ್‌ನಲ್ಲಿ “ಲ್ಯಾಪ್‌ಟಾಪ್ ಬಜಾರ್” ಎಂಬ ಅಂಗಡಿ ನಡೆಸುತ್ತಿದ್ದರು. ಈ ಅಂಗಡಿಯಿಂದ ಆರೋಪಿತೆ ಫರೀದಾ ಬೇಗಂ ನಕಲಿ ಚೆಕ್‌ಗಳನ್ನು ನೀಡಿ ಆ್ಯಪಲ್ ಮತ್ತು ಡೆಲ್ ಕಂಪನಿಯ ಒಟ್ಟು ₹1,98,000 ಮೌಲ್ಯದ ಮೂರು ಲ್ಯಾಪ್‌ಟಾಪ್‌ಗಳನ್ನು ಖರೀದಿಸಿ ಹಣ ಪಾವತಿ ಮಾಡದೆ ವಂಚನೆ ನಡೆಸಿದ್ದಾಳೆ.

ಈ ಪ್ರಕರಣದ ತನಿಖೆಯನ್ನು ಪೊಲೀಸ್ ನಿರೀಕ್ಷಕ ಮೋಹನ ಕೊಟ್ಟಾರಿಯವರ ನೇತೃತ್ವದಲ್ಲಿ ತನಿಖಾಧಿಕಾರಿ ವಿನಾಯಕ ತೊರಗಲ್ ಮತ್ತು ಮಹಿಳಾ ಸಿಬ್ಬಂದಿಗಳು ನಡೆಸಿ ಆರೋಪಿತೆಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಆರೋಪಿತೆಯನ್ನು ಇಂದು ಅಕ್ಟೋಬರ್ 19ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 2025 ನವಂಬರ್ 03ರ ತನಕ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ.

ಪೊಲೀಸರು ತಿಳಿಸಿರುವಂತೆ, ಫರೀದಾ ಬೇಗಂ ಹಲವು ಚಿನ್ನಾಭರಣ ಮತ್ತು ಎಲೆಕ್ಟ್ರಾನಿಕ್ ಅಂಗಡಿಗಳಿಗೆ ಭೇಟಿ ನೀಡಿ, ಸಿಹಿ ಮಾತುಗಳಿಂದ ವ್ಯಾಪಾರಿಗಳನ್ನು ನಂಬಿಸಿ ಮಾನ್ಯತೆ ಇಲ್ಲದ ಬ್ಯಾಂಕ್ ಚೆಕ್‌ಗಳನ್ನು ನೀಡಿ ಬೆಲೆಬಾಳುವ ವಸ್ತುಗಳನ್ನು ಖರೀದಿಸುತ್ತಿದ್ದಳು. ಆಕೆಯ ವಿರುದ್ಧ ಮಂಗಳೂರು ನಗರದ ಕಾವೂರು, ಬಜಪೆ, ಮೂಡಬಿದ್ರೆ, ಮುಲ್ಕಿ, ಪುತ್ತೂರು ಹಾಗೂ ಉಡುಪಿ ಜಿಲ್ಲೆಯ ಶಿರ್ವ ಪೊಲೀಸ್ ಠಾಣೆಗಳಲ್ಲಿ ಒಟ್ಟು 9 ವಂಚನೆ ಪ್ರಕರಣಗಳು ದಾಖಲಾಗಿವೆ. ಮುಲ್ಕಿ ಠಾಣೆಯ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೇ ಇದ್ದ ಕಾರಣ ಆಕೆಯ ವಿರುದ್ಧ ವಾರೆಂಟ್ ಕೂಡಾ ಹೊರಡಿಸಲಾಗಿದೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page