August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಎತ್ತರ ಜಿಗಿತದಲ್ಲಿ ಅಶ್ಮಿತಾ ಸುವಾರಿಸ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಥೊಲಿಕ್ ಸಭಾ ಸೂರಿಕುಮೇರು ಘಟಕದಿಂದ ಅಭಿನಂದನೆ


ಸೂರಿಕುಮೇರು ಚರ್ಚ್ ವ್ಯಾಪ್ತಿಯ ಅರುಣ್ ಮತ್ತು ಪ್ರೀತಿ ಸುವಾರಿಸ್ ದಂಪತಿ ಪುತ್ರಿ ಅಶ್ಮಿತಾ ಸುವಾರಿಸ್ ಬಂಟ್ವಾಳ ತಾಲೂಕು ಮಟ್ಟದಲ್ಲಿ ನಡೆದ ಕ್ರೀಡಾಕೂಟದಲ್ಲಿ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.


ಅಶ್ಮಿತಾರವರ ಯಶಸ್ಸಿನ ಹಿನ್ನೆಲೆಯಲ್ಲಿ ಸೂರಿಕುಮೇರು ಚರ್ಚ್ ನ ಕಥೊಲಿಕ್ ಸಭಾ ಸಂಘಟನೆಯು ಸಂತೋಷ ವ್ಯಕ್ತಪಡಿಸಿ, ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಪ್ರತಿಯೊಬ್ಬ ಸ್ಪರ್ಧಾಳುಗಳಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅಶ್ಮಿತಾ ಸುವಾರಿಸ್ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ. ಈ ಸಾಧನೆ ಅವರ ಪರಿಶ್ರಮ, ತಾಳ್ಮೆ ಮತ್ತು ಪೋಷಕರ ಪ್ರೋತ್ಸಾಹದ ಫಲವಾಗಿದೆ. ಇಂತಹ ಯುವ ಪ್ರತಿಭೆಗಳು ಭವಿಷ್ಯದಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಕೀರ್ತಿ ತರುವ ವಿಶ್ವಾಸ ನನಗಿದೆ,” ಎಂದು ಸೂರಿಕುಮೇರುವಿನಲ್ಲಿರುವ ಸೈಂಟ್ ಜೋಸೆಫ್ ಚರ್ಚ್ ನ ಕಥೊಲಿಕ್ ಸಭಾ ಘಟಕದ ಅಧ್ಯಕ್ಷ ಎಲಿಯಾಸ್ ಪಿರೇರಾ ಹೇಳಿದರು.


“ಅಶ್ಮಿತಾ ಅವರ ಸಾಧನೆಗೆ ಸ್ಥಳೀಯರು, ಶಿಕ್ಷಕರು ಹಾಗೂ ಸಹಪಾಠಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ತಾಲೂಕು ಮಟ್ಟದಲ್ಲಿ ತೋರಿಸಿದ ಶ್ರೇಷ್ಠ ಪ್ರದರ್ಶನ ಮುಂದಿನ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿಯೂ ಯಶಸ್ಸು ತಂದುಕೊಡಲಿ ಎಂದು ಎಲ್ಲರೂ ಹಾರೈಸಿದ್ದಾರೆ. ಅಶ್ಮಿತಾರವರ ಶ್ರಮ ಮತ್ತು ಸಾಧನೆ ಊರಿನ ಯುವ ಕ್ರೀಡಾಪಟುಗಳಿಗೆ ಪ್ರೇರಣೆಯಾಗಿದೆ” ಎಂದು ಸೂರಿಕುಮೇರು ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸ್ಟೀವನ್ ಪ್ರಕಾಶ್ ಮಾರ್ಟಿಸ್ ಹಾಗೂ ಕಾರ್ಯದರ್ಶಿ ಸ್ಟೀವನ್ ಆಲ್ವಿನ್ ಪಾಯ್ಸ್ ಇವರು ಹೇಳಿ ಅಭಿನಂದನೆಗಳನ್ನು ಸಲ್ಲಿಸಿ ಶುಭ ಹಾರೈಸಿದ್ದಾರೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page