August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವೃಕ್ಷಮಾತೆ ಡಾ. ಸಾಲುಮರದ ತಿಮ್ಮಕ್ಕ ನಿಧನ

ನಾಳೆ ಸರ್ಕಾರಿ ರಜೆ ಇಲ್ಲ – ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಖ್ಯಾತ ಪರಿಸರ ಹೋರಾಟಗಾರ್ತಿ, ನಾಡೋಜ, ಪದ್ಮಶ್ರೀ ಪುರಸ್ಕೃತರು ಹಾಗೂ ಕರ್ನಾಟಕ ಸರ್ಕಾರದ ಮಾನ್ಯ ಪರಿಸರ ರಾಯಭಾರಿ ವೃಕ್ಷಮಾತೆ ಡಾ. ಸಾಲುಮರದ ತಿಮ್ಮಕ್ಕರವರು ಇಂದು ನವೆಂಬರ್ 14ರಂದು ಶುಕ್ರವಾರ ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಕರ್ನಾಟಕ ಸರ್ಕಾರ ತನ್ಮಯ ಸಂತಾಪ ಸೂಚಿಸಿದೆ.

ಸರ್ಕಾರದ ಅಧಿಸೂಚನೆ ಪ್ರಕಾರ, ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ಆದರೆ ರಾಜ್ಯದಲ್ಲಿ ನಾಳೆ ನವೆಂಬರ್ 15ರಂದು ಶನಿವಾರ ಯಾವುದೇ ಸರ್ಕಾರಿ ರಜೆ ಘೋಷಿಸಲಾಗಿಲ್ಲ.

ಇನ್ನೊಂದೆಡೆ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣರವರ ಕುರಿತಾಗಿ ಹೊರಬಿದ್ದಿದ್ದ ‘ಮರಣ ಆದೇಶವನ್ನು ಯಾರೋ ಕಿಡಿಗೇಡಿಗಳು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದಾರೆ. ಆ ಆದೇಶಕ್ಕೆ ಸಹಿ ಮಾಡಿದ ಅಧಿಕಾರಿ ಪ್ರಸ್ತುತ ಆ ಇಲಾಖೆಯಲ್ಲಿ ಸೇವೆಯಲ್ಲಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ, ಸರ್ಕಾರದ ಅಧೀನ ಕಾರ್ಯದರ್ಶಿ-1 (ಪ್ರ) ಬಾಣದರಂಗಯ್ಯ ಎನ್.ಆರ್. ರವರ ಸಹಿ ಸಹಿತ ಅಧಿಸೂಚನೆ ಇಂದು ಹೊರಡಿಸಲಾಗಿದೆ.

You may also like

News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.
News

“ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ – ಸಮಿತಿ ರಚನೆಗೆ ಸಿಜೆ ಭರವಸೆ”

ಬೆಂಗಳೂರು: ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು

You cannot copy content of this page