May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಾಯು ವಿಹಾರಕ್ಕೆ ತೆರಳಿದ್ದ ವ್ಯಕ್ತಿಯ ಶವ ಪತ್ತೆ – ನಾಯಿ ದಾಳಿಯಿಂದ ಸಾವು ಶಂಕೆ

ಉಳ್ಳಾಲ ತಾಲ್ಲೂಕಿನ ಕುಂಪಲದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಅವರ ಮನೆಯ ಸಮೀಪ ನವೆಂಬರ್ 14ರಂದು ಶುಕ್ರವಾರ ಪತ್ತೆಯಾಗಿದೆ. ವಾಯುವಿಹಾರಕ್ಕೆ ತೆರಳಿದಾಗ ನಾಯಿ ದಾಳಿಯಿಂದ ಅವರು ಸಾವಿಗೀಡಾಗಿರಬಹುದು ಎಂದು ಶಂಕಿಸಲಾಗಿದೆ. ಮೃತರನ್ನು 60 ವರ್ಷ ಪ್ರಾಯದ ದಯಾನಂದ ಗಟ್ಟಿ ಎಂದು ಗುರುತಿಸಲಾಗಿದೆ.

ದಯಾನಂದರವರು ಮುಂಜಾನೆ 3 ಗಂಟೆ ಸುಮಾರಿಗೆ ಕುಂಪಲ ಬೈಪಾಸ್‌ ಬಳಿ ವಾಯುವಿಹಾರಕ್ಕೆ ತೆರಳಿದ್ದನ್ನು ಸ್ಥಳೀಯರು ನೋಡಿದ್ದಾರೆ. ಅವರ ದೇಹನ ಮೇಲಿನ ಗಾಯದ ಗುರುತುಗಳನ್ನು ನೋಡಿದರೆ, ಅವರ ಮೇಲೆ ಪ್ರಾಣಿ ದಾಳಿ ನಡೆಸಿದ ಹಾಗಿದೆ. ಅವರು ವಾಯು ವಿಹಾರ ನಡೆಸುವಾಗ ಕೋಳಿ ಮಾಂಸದ ಮಳಿಗೆ ಬಳಿ ನಾಯಿಯೊಂದು ಇತ್ತು. ಅದರ ಬಾಯಿಯಲ್ಲಿ ರಕ್ತದ ಕಲೆಗಳಿದ್ದವು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಆ ನಾಯಿಯೇ ಅವರ ಮೇಲೆ ದಾಳಿ ನಡೆಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗಾಯಗೊಂಡಿದ್ದ ದಯಾನಂದ ಗಟ್ಟಿಯವರು ಮನೆಯವರೆಗೆ ತಲುಪಿದ್ದು, ಅಂಗಳದ ಬಳಿ ಕುಸಿದು ಬಿದ್ದಿದ್ದರು. ಅವರ ಕಣ್ಣುಗುಡ್ಡೆಯೊಂದು ಹೊರಗೆ ಬಂದಿತ್ತು. ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯ ತಜ್ಞರನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಣಿದಾಳಿಯಿಂದ ಸಾವು ಸಂಭವಿಸುದ್ದನ್ನು ಖಚಿತಪಡಿಸಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಪತ್ರಿಕಾ ಪ್ರಕಟನೆಯಲ್ಲಿ ಮಾಹಿತಿ ನೀಡಿದ್ದಾರೆ.

ನಾಯಿ ಮೃತದೇಹದ ಮೇಲೆ ಇದ್ದಿದ್ದನ್ನು ನಾನು ಗಮನಿಸಿದೆ ಎಂದು ಸ್ಥಳೀಯ ಹಾಲು ಮಾರಾಟದ ಅಂಗಡಿಯ ಮಾಲೀಕ ವಿನೋದ್‌ ಕುಂಪಲ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ. ಮುಂಜಾನೆ ಅಂಗಡಿ ತೆರೆಯಲೆಂದು ಕುಂಪಲ ಬೈಪಾಸಿಗೆ ಬಂದಿದ್ದೆ. ಸ್ಥಳದಲ್ಲಿ ಏನೂ ಗಮನಕ್ಕೆ ಬಂದಿರಲಿಲ್ಲ. ಮುಖಂಡರೊಬ್ಬರು ಮೃತದೇಹ ಇರುವುದನ್ನು ಗಮನಕ್ಕೆ ತಂದಾಗ ತಕ್ಷಣಕ್ಕೆ ತೆರಳಿದೆ. ಈ ವೇಳೆ ಮೃತದೇಹದ ಬಳಿ ನಾಯಿ ಕುಳಿತಿದ್ದು, ಓಡಿಸಲು ಯತ್ನಿಸಿದರೂ ತೆರಳಲಿಲ್ಲ. ಬಳಿಕ ಹತ್ತಿರದಲ್ಲೇ ಇದ್ದ ರಿಕ್ಷಾ ತೆಗೆಯಲು ಮುಂದಾದಾಗ ನಾಯಿ ಓಡಿದೆ. ನಾಯಿಯ ಮೈ ಪೂರ್ತಿ ರಕ್ತ ಇದ್ದು ಹತ್ತಿರದ ಅಂಗಡಿ ಮುಂದೆಯೂ ರಕ್ತ ವ್ಯಕ್ತಿಯ ಕಣ್ಣು ಬಿದ್ದುಕೊಂಡಿದ್ದನ್ನು ಆಮೇಲೆ ಗಮನಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page