August 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಿರುಕುಳದ ಬೇಸರದಿಂದ ಹರೀಶ್ ಆತ್ಮಹತ್ಯೆ – ವೆಲ್ಡರ್ ಹೇಮಂತ್ ಆಚಾರ್ಯ ವಿರುದ್ಧ ಪೊಲೀಸ್ ಕ್ರಮ, ಪ್ರಕರಣ ದಾಖಲು

ಪುತ್ತೂರಿನ ಒಂದು ಕಾಂಪ್ಲೆಕ್ಸ್‌ನಲ್ಲಿ ವಾಹನ ಪೈಟಿಂಗ್ ಕೆಲಸ ಮಾಡುತ್ತಿದ್ದ ಬಂಟ್ವಾಳ ಇಡ್ಕಿದು ನಿವಾಸಿ ಹರೀಶ್ (ಮೃತ) ಅವರಿಗೆ, ಅದೇ ಕಟ್ಟಡದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಹೇಮಂತ್ ಆಚಾರ್ಯ ಎಂಬಾತ ಕಳೆದ ಒಂದು ತಿಂಗಳಿನಿಂದ ವಿನಾಕಾರಣ ಬೈಯುತ್ತಾ, ಮಾನಸಿಕ ಕಿರುಕುಳ ನೀಡುತ್ತಿದ್ದಾನೆಂದು ತಿಳಿದು ಬಂದಿದೆ.

ಕೆಲ ದಿನಗಳ ಹಿಂದೆ ಆರೋಪಿಯು ಹರೀಶ್ ರವರ ಮೇಲೆ ದೌರ್ಜನ್ಯ ನಡೆಸಿ, ತಲ್ವಾರ್ ಹಿಡಿದು ಜೀವ ಬೆದರಿಕೆ ಹಾಕಿದ್ದಾನೆ ಎಂದು ಮೃತರ ಮಗಳು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕಿರುಕುಳದಿಂದ ಮನನೊಂದು ಹರೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಮಗಳು ಹೇಳಿಕೆ ನೀಡಿದ್ದಾರೆ.

ಈ ದೂರಿನ ಆಧಾರದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ.: 112/2025, ಕಲಂ 108 BNS ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೊದಲಿನಿಂದಲೇ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಸ್ವಾಭಾವಿಕ ಮರಣ (UDR) ಪ್ರಕರಣವನ್ನು, ಮಗಳ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ನಗರದ ಪೊಲೀಸರಿಗೆ ಮುಂದಿನ ತನಿಖೆಗೆ ವರ್ಗಾಯಿಸಲಾಗುತ್ತಿದೆ. ತನಿಖೆ ಮುಂದುವರಿಯುತ್ತಿದೆ.

You may also like

News

ಓಣಂ ಸಂಭ್ರಮದ ನಡುವೆ ದುರಂತ – ತೆರೆದ ಬಾವಿಗೆ ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು

ಓಣಂ ಆಚರಣೆಯ ಸಂಭ್ರಮದ ನಡುವೆ ಸಂಭವಿಸಿದ ದಾರುಣ ಘಟನೆಯೊಂದರಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಕನ್ಹಂಗಾಡ್ ಸಮೀಪದ ಚೀಮೇನಿಯಲ್ಲಿ ನಡೆದಿದೆ. ಮೃತ
News

National Library Day Celebrated at Father Muller Charitable Institutions Mangaluru

The National Library Day was celebrated at Father Muller Charitable Institutions Central Library on 29th August 2026 at 3.00p.m. in

You cannot copy content of this page