August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಹುನಿರೀಕ್ಷಿತ ಕೊಂಕಣಿ ಚಿತ್ರ ‘ಬಾಪಾಚೆ ಪುತಾಚೆ ನಾಂವಿಂ’ ನಾಳೆ ನವೆಂಬರ್ 28ರಂದು ಮಂಗಳೂರು ಭಾರತ್ ಸಿನೆಮಾಸ್‌ನಲ್ಲಿ ಬಿಡುಗಡೆ

ವಿಶನ್ ಕೊಂಕಣಿ ನಿರ್ಮಾಣದ ದಾಯ್ಜಿವರ್ಲ್ಡ್ ಫಿಲ್ಮ್ಸ್ ಬ್ಯಾನರಿನಡಿ ತಯಾರಾದ ಚಲನಚಿತ್ರ

ವಿಶನ್ ಕೊಂಕಣಿ ನಿರ್ಮಾಣದ ದಾಯ್ಜಿವರ್ಲ್ಡ್ ಫಿಲ್ಮ್ಸ್ ಬ್ಯಾನರಿನಡಿ ಮೂಡಿಬಂದಿರುವ ಬಹುನಿರೀಕ್ಷಿತ ಕೊಂಕಣಿ ಚಿತ್ರ ‘ಬಾಪಾಚೆ ಪುತಾಚೆ ನಾಂವಿಂ’ ನಾಳೆ ನವೆಂಬರ್ 28ರಂದು ಶುಕ್ರವಾರ ಮಂಗಳೂರಿನ ಭಾರತ್ ಸಿನೆಮಾಸ್‌ನಲ್ಲಿ ತೆರೆಕಾಣಲಿದೆ.

ಈ ಚಿತ್ರವು ಈಗಾಗಲೇ ಹಲವು ಪ್ರೀಮಿಯರ್ ಪ್ರದರ್ಶನಗಳಲ್ಲಿ ಭಾಗಿಯಾಗಿ ಪ್ರೇಕ್ಷಕರಿಂದ ಹಾಗೂ ಸಿನೆಮಾ ವಿಮರ್ಶಕರಿಂದ ಭರ್ಜರಿ ಮೆಚ್ಚುಗೆ ಪಡೆಯುತ್ತಿದೆ. ಯುವ ಸಾಹಿತಿ ಹಾಗೂ ಪತ್ರಕರ್ತ ಸ್ಟ್ಯಾನಿ ಬೇಳ ಈ ಚಿತ್ರಕ್ಕೆ ಕಥೆ ಹಾಗೂ ಸಂಭಾಷಣೆ ಬರೆದು ದಿಗ್ದರ್ಶನ ವಹಿಸಿರುವುದು ವಿಶೇಷ.

ಚಿತ್ರಕ್ಕೆ ಸಂಜಯ್ ರೊಡ್ರಿಗಸ್ ಹಿನ್ನಲೆ ಸಂಗೀತ ನೀಡಿದ್ದು, ಯುವ ಛಾಯಾಗ್ರಾಹಕ ಜೋಯಲ್ ಶಮನ್ ಕ್ಯಾಮೆರಾ ಕಾರ್ಯ ನಿರ್ವಹಿಸಿದ್ದಾರೆ. ನಿರ್ಮಾಣ ಸಂಸ್ಥೆಯ ಪತ್ರಿಕಾ ಪ್ರಕಟಣೆಯ ಪ್ರಕಾರ, ಚಿತ್ರವನ್ನು ಉಡುಪಿ, ಪುತ್ತೂರು ಹಾಗೂ ದೇರಳಕಟ್ಟೆಗಳಲ್ಲಿ ಡಿಸೆಂಬರ್ 5ರಂದು ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ. ಚಿತ್ರ ಬಿಡುಗಡೆಯತ್ತ ಕೊಂಕಣಿ ಪ್ರೇಕ್ಷಕರಲ್ಲಿ ಹೆಚ್ಚಿದ ನಿರೀಕ್ಷೆ ಕಂಡುಬರುತ್ತಿದೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page