May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾರ್ಕಳ ಕ್ರೈಸ್ಟ್ ಕಿಂಗ್ ವಿದ್ಯಾರ್ಥಿನಿ ಏಂಜೆಲ್ ನಿಧನ

ಕಾರ್ಕಳದ ಕ್ರೈಸ್ಟ್ ಕಿಂಗ್ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಹೆಬ್ರಿ ತಾಲೂಕು ಮುದ್ರಾಡಿಯ 17ವರ್ಷ ಪ್ರಾಯದ ಏಂಜೆಲ್ ಆಲ್ಪನಾ ಜೇಮ್ಸ್ ಇಂದು ನವೆಂಬರ್ 27ರಂದು ಗುರುವಾರ ಮೃತಪಟ್ಟಿದ್ದಾಳೆ.

ನವೆಂಬರ್ 26ರಂದು ಬುಧವಾರ ಸ್ಥಳೀಯ ಕ್ರೈಸ್ಟ್ ಕಿಂಗ್ ಚರ್ಚ್‌ನ ವಾರ್ಷಿಕ ಹಬ್ಬವಿದ್ದ ಕಾರಣ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಗೆ ರಜೆ ಸಾರಲಾಗಿತ್ತು. ಹೀಗಾಗಿ ಏಂಜೆಲ್ ಮನೆಯಲ್ಲೇ ಇದ್ದಳು. ಏಕಾಏಕಿ ಆಕೆಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದ ಕಾರಣ ಹೆತ್ತವರು ಹೆಬ್ರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ವೈದ್ಯರು ಆಕೆಗೆ ಇಂಜೆಕ್ಷನ್ ನೀಡಿದ್ದರು. ಮನೆಗೆ ಬಂದ ಬಳಿಕ ಏಂಜೆಲ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಮತ್ತೆ ಹೆಬ್ರಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೊಂಡೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾಳೆ. ವಿಷಯುಕ್ತ ಆಹಾರ ಸೇವೆನೆಯಿಂದಾಗಿ ಮೃತಪಟ್ಟಿದ್ದಾಳೆ ಎನ್ನಲಾಗುತ್ತಿದೆ. ಏಂಜೆಲ್ ಜಾಕೋಬ್ ಮತ್ತು ಮೇರಿ ಬೀನಾ ದಂಪತಿಯ ಏಕೈಕ ಪುತ್ರಿಯಾಗಿದ್ದು, ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಳು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page