August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಾಮಂಜೂರಿನ ಸೈಂಟ್ ರೈಮಂಡ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ

ಹೆತ್ತವರಿಗೆ ಹಾಗೂ ಶಿಕ್ಷಕರಿಗೆ ಮೊದಲು ಗೌರವ ನೀಡಿ” – ರಘು ಸಾಲಿಯಾನ್ ವಾಮಂಜೂರು

ವಾಮಂಜೂರಿನ ಸೈಂಟ್ ರೈಮಂಡ್ಸ್ ಆಂಗ್ಲ ಮಾಧ್ಯಮ ಶಾಲೆ ಇಲ್ಲಿ 2025-26ನೇ ಸಾಲಿನ ವಾರ್ಷಿಕ ಬಹುಮಾನ ವಿತರಣಾ ಸಮಾರಂಭವು ನವೆಂಬರ್ 29ರಂದು ಶನಿವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ವಂದನೀಯ ಭಗಿನಿ ಸಿಸಿಲಿಯಾ ಮೆಂಡೊನ್ಸಾ ಬಿಎಸ್ ಇವರು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿ ಮಕ್ಕಳಾ ಸಾಧನೆಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ವಾಮಂಜೂರಿನ ಸಾಮಾಜಿಕ ಮುಂದಾಳು ರಘು ಸಾಲಿಯಾನ್ ಮಕ್ಕಳಿಗೆ ಬಹುಮಾನ ನೀಡಿ, “ಹೆತ್ತವರಿಗೆ ಹಾಗೂ ಶಿಕ್ಷಕರಿಗೆ ಮೊದಲು ಗೌರವ ನೀಡಬೇಕು ಎಂದು ಮಕ್ಕಳಿಗೆ ಕಿವಿ ಮಾತು ಹೇಳಿದರು.  ಸ್ಥಳೀಯ ಕಾನ್ವೆಂಟಿನ ಸುಪೀರಿಯರ್ ವಂದನೀಯ ಭಗಿನಿ ಲವಿಟ ಮೊರಾಸ್ ಬಿಎಸ್ ಬಹುಮಾನ ನೀಡಿ ಮಕ್ಕಳಿಗೆ ಅಭಿನಂದಿಸಿದರು. ಸಭಾ ಕಾರ್ಯಕ್ರಮದ ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ವಂದನೀಯ ಭಗಿನಿ ಮನಿಶ ರೊಡ್ರಿಗಸ್ ಸ್ವಾಗತಿಸಿದರು. ವಂದನೀಯ ಭಗಿನಿ ಸುಷ್ಮಾ ಮೊಂತೇರೊ ವಂದಿಸಿದರು. ರೀಮಾ ಕುಟಿನ್ಹಾ ಕಾರ್ಯಕ್ರಮ ನಿರೂಪಿಸಿದರು.

You may also like

News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.
News

“ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ – ಸಮಿತಿ ರಚನೆಗೆ ಸಿಜೆ ಭರವಸೆ”

ಬೆಂಗಳೂರು: ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು

You cannot copy content of this page