May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

1700ಕ್ಕೂ ಹೆಚ್ಚು ಕುಟುಂಬಗಳಿಗೆ 9 ಕೋಟಿ ರೂಪಾಯಿ ಸೇವೆ — ಅರ್ಜುನ್ ಭಂಡಾರ್ಕರ್‌ಗೆ ಹುಟ್ಟೂರ ಸನ್ಮಾನ

ಕಳೆದ ಆರು ವರ್ಷಗಳಿಂದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಮೂಲಕ 1700ಕ್ಕೂ ಅಧಿಕ ಕುಟುಂಬಗಳಿಗೆ ಸುಮಾರು 9 ಕೋಟಿ ರೂಪಾಯಿ ಮೌಲ್ಯದ ಸೇವೆಯನ್ನು ದಾನಿಗಳ ಸಹಕಾರದಿಂದ ಸಮಾಜಕ್ಕೆ ಅರ್ಪಣೆಗೈದ ಸಂಸ್ಥಾಪಕ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ 2025 ಪುರಸ್ಕೃತ ಅರ್ಜುನ್ ಭಂಡಾರ್ಕರ್ ಅವರಿಗೆ ವಿಶಿಷ್ಟ ಸನ್ಮಾನ ಕಾದಿದೆ.

 

 

ಸೇವಾಸಂಸ್ಥೆಗಳ ಸಹಭಾಗಿತ್ವದಲ್ಲಿ ಹುಟ್ಟೂರ ಅಭಿನಂದನಾ ಸಮಿತಿ ವತಿಯಿಂದ ಆಯೋಜಿಸಿರುವ ಈ ಹುಟ್ಟೂರ ಸನ್ಮಾನ ಕಾರ್ಯಕ್ರಮವು ಡಿಸೆಂಬರ್ 07ರಂದು ಭಾನುವಾರ ಬೆಳಿಗ್ಗೆ 9.00ರಿಂದ 10.30ರ ತನಕ ಬಂಟ್ವಾಳದ ರಾಜಸೌಧದ ಸ್ವರ್ಣಸಭಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಭಿನಂದನಾ ಸಮಿತಿ ಪ್ರಕಟಿಸಿದೆ.

ಸೇವಾ ತತ್ವ, ಸಮಾಜಮುಖಿ ಕಾರ್ಯ ಹಾಗೂ ಅನನ್ಯ ಕೊಡುಗೆಗಳ ಪರಿಗಣನೆಯೊಂದಿಗೆ ನೀಡಲಾಗುತ್ತಿರುವ ಈ ಸನ್ಮಾನವನ್ನು ಸ್ಥಳೀಯರು ಹಾಗೂ ಸಮಾಜಸೇವಕರು ಹರ್ಷದಿಂದ ಸ್ವಾಗತಿಸಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page