August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಬಕದಲ್ಲಿ ಲಾರಿಯಿಂದ ರೂಪಾಯಿ 21.44 ಲಕ್ಷ ಮೌಲ್ಯದ ಕಾಫಿ ಚೀಲ ಕಳ್ಳತನ

ಪುತ್ತೂರು ಪೊಲೀಸರ ತ್ವರಿತ ಕ್ರಮಐದು ಮಂದಿ ಆರೋಪಿಗಳು ವಶಕ್ಕೆ

ಪುತ್ತೂರು ತಾಲೂಕಿನ ಕಬಕ ನೆಹರೂ ನಗರ ಪ್ರದೇಶದಲ್ಲಿ ನಿಂತಿದ್ದ ಲಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ ಚೀಲಗಳನ್ನು ಕದ್ದ ಪ್ರಕರಣವನ್ನು ಪುತ್ತೂರು ನಗರ ಪೊಲೀಸ್ ಠಾಣೆ ಸಿಬ್ಬಂದಿ ಪತ್ತೆ ಹಚ್ಚಿದ್ದಾರೆ. ಪುತ್ತೂರು ಕಬಕ ನಿವಾಸಿ 29 ವರ್ಷ ಪ್ರಾಯದ ತೃತೇಶ್ ಸಲ್ಲಿಸಿದ್ದ ದೂರಿನ ಪ್ರಕಾರ, KA 19 AB 2258 ಲಾರಿಯಲ್ಲಿ ಡಿಸೆಂಬರ್ 3ರಂದು ಬುಧವಾರ ಪಿರಿಯಾ ಪಟ್ಟಣದ ಕಾಫಿ ಕ್ಯೂರಿಂಗ್ ಕಂಪೆನಿಯಿಂದ ತಲಾ 60 ಕೆ.ಜಿ. ತೂಕದ 320 ಚೀಲ ಕಾಫಿ ಬೀಜಗಳನ್ನು ಮಂಗಳೂರಿಗೆ ಸಾಗಿಸಲಾಗುತ್ತಿತ್ತು.

ರಾತ್ರಿ ಪುತ್ತೂರಿಗೆ ತಲುಪಿದ ಬಳಿಕ ಕಬಕ ನೆಹರೂ ನಗರದಲ್ಲಿ ಲಾರಿಯನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಮನೆಗೆ ತೆರಳಿದ್ದ ಚಾಲಕ, ಡಿಸೆಂಬರ್ 4ರಂದು ಗುರುವಾರ ಲಾರಿಯನ್ನು ತೆಗೆದುಕೊಂಡು ಮಂಗಳೂರಿನ ಬಂದರಿಗೆ ತಲುಪಿದಾಗ ಹಿಂಬದಿ ಸೀಲ್ ಲಾಕ್ ತುಂಡಾಗಿರುವುದು ಗಮನಕ್ಕೆ ಬರುತ್ತದೆ. ಕಂಪೆನಿ ಸಿಬ್ಬಂದಿ ಲೋಡ್ ಪರಿಶೀಲಿಸಿದಾಗ ಸುಮಾರು ರೂಪಾಯಿ 21,44,000/- ಮೌಲ್ಯದ 80 ಕಾಫಿ ಚೀಲಗಳು ಕಳವಾಗಿರುವುದು ಬೆಳಕಿಗೆ ಬಂದಿದೆ.

ಘಟನೆಯ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 120/2025, ಕಲಂ 303(2) BNS-2023ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಯಿತು. ತನಿಖೆಯ ವೇಳೆ, ಆರೋಪಿ ಆಶ್ಲೇಷ ಭಟ್ ತನ್ನ ಸಹಚರರಾದ ನಾರಾಯಣ ಶೆಟ್ಟಿಗಾರ್, ಮಿಥುನ್ ಕುಮಾರ್, ವಿಜಯ ಶೆಟ್ಟಿ ಮತ್ತು ಮಹಮ್ಮದ್ ಅಶ್ರಫ್ ಇವರೊಂದಿಗೆ ಸೇರಿ ಕೃತ್ಯ ಎಸಗಿರುವುದು ಪತ್ತೆಯಾಗಿದೆ.

ಪೊಲೀಸರು ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆದು, ಕೃತ್ಯಕ್ಕೆ ಬಳಸಿದ ಎರಡು ಆಟೋಗಳು, ಒಂದು ಗೂಡ್ಸ್ ಟೆಂಪೋ, ಜೊತೆಗೆ ಕಳವಾದ 80 ಕಾಫಿ ಚೀಲಗಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ. ಪುತ್ತೂರು ಪೊಲೀಸರು ಘಟನೆಗೆ ನೀಡಿದ ತ್ವರಿತ ಸ್ಪಂದನೆಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

You may also like

News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.
News

“ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ – ಸಮಿತಿ ರಚನೆಗೆ ಸಿಜೆ ಭರವಸೆ”

ಬೆಂಗಳೂರು: ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು

You cannot copy content of this page