May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಂಗಳೂರಲ್ಲಿ ಬೆಳಂಬೆಳಗ್ಗೆ ಜೆಸಿಬಿ ಆರ್ಭಟ – 200ಕ್ಕೂ ಹೆಚ್ಚು ಮನೆಗಳು ನೆಲಸಮ

ಆಡಳಿತ ಕಣ್ಣುಮುಚ್ಚಿದ್ದರ ಪರಿಣಾಮ ನಿರ್ಮಾಣಗೊಂಡ ಅಕ್ರಮ ಕಾಮಗಾರಿ

ವರ್ಷಗಳ ಕಾಲ ಕಣ್ಣುಮುಚ್ಚಿಕೊಂಡಿದ್ದ ಆಡಳಿತ ಯಂತ್ರ ಇದೀಗ ಅಚಾನಕ್ ಎಚ್ಚೆತ್ತುಕೊಂಡಂತಾಗಿದೆ. ಸಿಲಿಕಾನ್ ಸಿಟಿಯ ಹೊರವಲಯದ ಕೋಗಿಲು ಲೇಔಟ್‌ನಲ್ಲಿ ಸರ್ಕಾರಿ ಗೋಮಾಳ ಭೂಮಿಯ ಮೇಲೆ ಅಕ್ರಮವಾಗಿ ನಿರ್ಮಿಸಿದ್ದ ಸುಮಾರು 200ಕ್ಕೂ ಹೆಚ್ಚು ಮನೆಗಳನ್ನು ಇಂದು ಡಿಸೆಂಬರ್ 20ರಂದು ಶನಿವಾರ ಬೆಳಂಬೆಳಗ್ಗೆ ಜೆಸಿಬಿಗಳ ಮೂಲಕ ನೆಲಸಮಗೊಳಿಸಲಾಗಿದೆ. ಆದರೆ ಈ ಅಕ್ರಮಗಳಿಗೆ ಇಷ್ಟು ದಿನ ಅವಕಾಶ ನೀಡಿದವರು ಯಾರು ಎಂಬ ಪ್ರಶ್ನೆ ಇದೀಗ ಜನಮನದಲ್ಲಿ ಕಾಡುತ್ತಿದೆ.

ಶ್ರೀನಿವಾಸಪುರದ ಕೋಗಿಲು ಲೇಔಟ್‌ನ ಗೋಮಾಳ ಭೂಮಿಯನ್ನು ನಗರ ಪಾಲಿಕೆಗೆ ಹಸ್ತಾಂತರಿಸಲಾಗಿದ್ದರೂ, ಯಾವುದೇ ಅನುಮತಿ ಇಲ್ಲದೆ ಮನೆಗಳು ತಲೆಎತ್ತಿದ್ದು ಆಡಳಿತದ ಭಾರೀ ವೈಫಲ್ಯವನ್ನೇ ತೋರಿಸುತ್ತದೆ. ವರ್ಷಗಳ ಕಾಲ ವಿದ್ಯುತ್, ನೀರು, ರಸ್ತೆ ಸೌಲಭ್ಯ ಪಡೆದು ಮನೆಗಳು ನಿಂತಿದ್ದರೂ, ಈಗ ಏಕಾಏಕಿ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಇಳಿದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ನ್ಯಾಯಾಲಯದ ನಿರ್ದೇಶನ ಹಾಗೂ ಪೂರ್ವ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ಸಮರ್ಥಿಸಿಕೊಂಡರೂ, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಬದುಕು ಇದೀಗ ಜೆಸಿಬಿಗಳ ಮುಂದೆ ಧೂಳಾಗಿ ಪರಿಣಮಿಸಿದೆ. ತೆರವು ಕಾರ್ಯಾಚರಣೆಗೆ ಆರು ಜೆಸಿಬಿಗಳನ್ನು ನಿಯೋಜಿಸಲಾಗಿದ್ದು, ಯಾವುದೇ ಪ್ರತಿರೋಧ ಉಂಟಾಗದಂತೆ 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

ಬೆಳಗ್ಗಿನಿಂದಲೇ ಜೆಸಿಬಿಗಳ ಗರ್ಜನೆ, ಮನೆಗಳ ಕುಸಿತ, ಮಹಿಳೆಯರು ಮತ್ತು ಮಕ್ಕಳ ಅಳಲು—ಕೋಗಿಲು ಲೇಔಟ್ ಇಂದು ಕಣ್ಣೀರಿನ ಕಣಿವೆಯಾಗಿ ಮಾರ್ಪಟ್ಟಿದೆ. ಕೆಲ ನಿವಾಸಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರೂ, ಭದ್ರತಾ ಪಡೆಗಳ ಬಲದ ಮುಂದೆ ಅವರ ಧ್ವನಿ ಮಗ್ಗುಚ್ಛಿದೆ.

ಸರ್ಕಾರಿ ಜಾಗವನ್ನು ರಕ್ಷಿಸುವುದು ಅಗತ್ಯವೇ ಆದರೆ, ಅಕ್ರಮ ನಿರ್ಮಾಣಕ್ಕೆ ವರ್ಷಗಳ ಕಾಲ ಅವಕಾಶ ನೀಡಿದ ಅಧಿಕಾರಿಗಳ ವಿರುದ್ಧ ಏನು ಕ್ರಮ? ಒತ್ತುವರಿ ಮಾಡುವವರಷ್ಟೇ ಅಲ್ಲ, ಮೌನವಾಗಿ ಬೆಂಬಲಿಸಿದ ಅಧಿಕಾರಿಗಳ ಮೇಲೂ ಕ್ರಮ ಜರುಗಿಸುವುದೇ ಎಂಬ ಪ್ರಶ್ನೆಗಳಿಗೆ ಜಿಲ್ಲಾಡಳಿತ ಇನ್ನೂ ಉತ್ತರಿಸಿಲ್ಲ. ಜೆಸಿಬಿ ಮಾತ್ರ ಓಡುತ್ತಿದೆ, ಆದರೆ ಹೊಣೆಗಾರಿಕೆ ಯಾರ ಮೇಲಿದೆ ಎಂಬುದು ಇನ್ನೂ ಮಸುಕಲ್ಲೇ ಉಳಿದಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page