May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುತ್ತೂರು ಪರ್ಲಡ್ಕ ಜಂಕ್ಷನ್‌ನಲ್ಲಿ ಗಾಂಜಾ ಮಾರಾಟ – 400 ಗ್ರಾಂ ನಿಷೇಧಿತ ಗಾಂಜಾ ವಶ, ಆರೋಪಿಯ ಬಂಧನ

ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಜಂಕ್ಷನ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆ PSI ಜನಾರ್ಧನ ಕೆ.ಎಂ. ಅವರು ಸಿಬ್ಬಂದಿಗಳೊಂದಿಗೆ ಜನವರಿ 01ರಂದು ಗುರುವಾರ ಬೆಳಿಗ್ಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಪುತ್ತೂರು ಕಸಬಾ ಗ್ರಾಮ ನಿವಾಸಿ 36 ವರ್ಷ ಪ್ರಾಯದ ಮಹಮ್ಮದ್ ತೌಸೀಫ್ ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ತನ್ನ ಬಳಿ ನಿಷೇಧಿತ ಗಾಂಜಾ ಹೊಂದಿರುವುದಾಗಿ ಆರೋಪಿಯು ಒಪ್ಪಿಕೊಂಡಿದ್ದಾನೆ. ತಪಾಸಣೆ ನಡೆಸಿದಾಗ ಅವನ ಬಳಿ ಒಟ್ಟು 400 ಗ್ರಾಂ ಗಾಂಜಾ ಪತ್ತೆಯಾಗಿದೆ.

ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 02/2026 ಅಡಿ, ಎನ್‌ಡಿಪಿಎಸ್ ಕಾಯ್ದೆ 1985ರ ಕಲಂ 8(ಸಿ) ಹಾಗೂ 20(ಬಿ)ರಂತೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ವಶಕ್ಕೆ ಪಡೆದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page