August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಭಾಜಪ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ – ಮೋದಿ ಆಡಳಿತ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳ ಭಾಜಪ ಸೇರ್ಪಡೆ

ಬೆಳ್ತಂಗಡಿ ಮಂಡಲ ಭಾರತೀಯ ಜನತಾ ಪಾರ್ಟಿಯ ವಿಶೇಷ ಕಾರ್ಯಕಾರಿಣಿ ಸಭೆಯು ಜನವರಿ 5ರಂದು ಸೋಮವಾರ ಜೈನ್ ಪೇಟೆಯ ಕಿನ್ನಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತ ಕಾರ್ಯವೈಖರಿಯನ್ನು ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್ ಹಾಗೂ ಪ್ರಸನ್ನ ಕುಮಾರ್ ಅವರು ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.

ಸಭೆಯಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮನಾಥ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಸೀತಾರಾಮ ಬೆಳಾಲು ಹಾಗೂ ವಸಂತಿ ಮಚ್ಚಿನ ಉಪಸ್ಥಿತರಿದ್ದರು.

ಸಭೆಯಲ್ಲಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಕ್ಷದ ಸಂಘಟನೆ ಹಾಗೂ ಮುಂದಿನ ಕಾರ್ಯತಂತ್ರಗಳ ಕುರಿತು ಚರ್ಚಿಸಿದರು.

You may also like

News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.
News

“ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ – ಸಮಿತಿ ರಚನೆಗೆ ಸಿಜೆ ಭರವಸೆ”

ಬೆಂಗಳೂರು: ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು

You cannot copy content of this page