August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜಿಲ್ಲೆಯಾದ್ಯಂತ ಡಿಜಿಟಲ್ ಇ–ಸ್ಟ್ಯಾಂಪ್ ತರಬೇತಿ ಕಾರ್ಯಕ್ರಮ

ಡಿಜಿಟಲ್ ಇ–ಸ್ಟ್ಯಾಂಪ್ ಮಾರಾಟ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಉದ್ದೇಶದಿಂದ ಜಿಲ್ಲೆಯಾದ್ಯಂತ ವಿವಿಧ ಉಪನೋಂದಣಿ ಕಚೇರಿಗಳ ವ್ಯಾಪ್ತಿಯಲ್ಲಿ ಡಿಜಿಟಲ್ ಇ–ಸ್ಟ್ಯಾಂಪ್ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ತರಬೇತಿ ಕಾರ್ಯಕ್ರಮವು ಜನವರಿ 9ರಂದು ಮಧ್ಯಾಹ್ನ 12.00 ಗಂಟೆಗೆ ಪುತ್ತೂರು ಉಪನೋಂದಣಿ ಕಚೇರಿಯಲ್ಲಿ ಹಾಗೂ ಸಂಜೆ 4.00 ಗಂಟೆಗೆ ಸುಳ್ಯ ಉಪನೋಂದಣಿ ಕಚೇರಿಯಲ್ಲಿ ನಡೆಯಲಿದೆ. ಜನವರಿ 10ರಂದು ಮಧ್ಯಾಹ್ನ 12.00 ಗಂಟೆಗೆ ಮಂಗಳೂರು ನಗರ ಕೇಂದ್ರೀಯ ಉಪನೋಂದಣಿ ಕಚೇರಿ ಹಾಗೂ ಅದೇ ದಿನ ಮಧ್ಯಾಹ್ನ 12.00 ಗಂಟೆಗೆ ಮಂಗಳೂರು ತಾಲೂಕು ಉಪನೋಂದಣಿ ಕಚೇರಿಯಲ್ಲಿ ತರಬೇತಿ ನಡೆಯಲಿದೆ.

ಜನವರಿ 12ರಂದು ಮಧ್ಯಾಹ್ನ 12.00 ಗಂಟೆಗೆ ಬೆಳ್ತಂಗಡಿ ಉಪನೋಂದಣಿ ಕಚೇರಿಯಲ್ಲಿ, ಸಂಜೆ 4.00 ಗಂಟೆಗೆ ಬಂಟ್ವಾಳ ಉಪನೋಂದಣಿ ಕಚೇರಿ ಹಾಗೂ ವಿಟ್ಲ ಉಪನೋಂದಣಿ ಕಚೇರಿಯಲ್ಲಿ ತರಬೇತಿ ಆಯೋಜಿಸಲಾಗಿದೆ. ಅಲ್ಲದೆ ಜನವರಿ 13ರಂದು ಮಧ್ಯಾಹ್ನ 12.00 ಗಂಟೆಗೆ ಮೂಲ್ಕಿ ಉಪನೋಂದಣಿ ಕಚೇರಿಯಲ್ಲಿ ಹಾಗೂ ಸಂಜೆ 4.00 ಗಂಟೆಗೆ ಮೂಡುಬಿದಿರೆ ಉಪನೋಂದಣಿ ಕಚೇರಿಯಲ್ಲಿ ತರಬೇತಿ ನಡೆಯಲಿದೆ.

ಈ ತರಬೇತಿಯ ಸದುಪಯೋಗವನ್ನು ಇ–ಸ್ಟ್ಯಾಂಪ್ ಮಾರಾಟ ವ್ಯವಸ್ಥೆಯನ್ನು ನಿರ್ವಹಿಸುತ್ತಿರುವ ಸಹಕಾರಿ ಹಾಗೂ ಸೌಹಾರ್ದ ಸಂಸ್ಥೆಗಳ ಸಿಬ್ಬಂದಿ ವರ್ಗದವರು ಪಡೆದುಕೊಳ್ಳಬಹುದು. ತರಬೇತಿ ನಡೆಯುವ ಸ್ಥಳ ಮತ್ತು ಸಮಯದ ವಿವರಗಳನ್ನು ಸಂಬಂಧಿಸಿದ ಉಪನೋಂದಣಿ ಅಧಿಕಾರಿಗಳಿಂದ ತಿಳಿದುಕೊಂಡು ತರಬೇತಿಗೆ ಹಾಜರಾಗುವಂತೆ ದಕ್ಷಿಣ ಕನ್ನಡ ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ
News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.

You cannot copy content of this page