May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ – ಕದ್ರಿ ಪೊಲೀಸರ ದಾಳಿ, ಯುವಕ ಬಂಧನ – MDMA ಹಾಗೂ ಬೈಕ್ ವಶ

ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಯುವಕನನ್ನು ಕದ್ರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ಪೂರ್ವ ಪೊಲೀಸ್ ಠಾಣಾಧಿಕಾರಿಗಳಿಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಈ ಕಾರ್ಯಚರಣೆ ನಡೆಸಲಾಗಿದೆ.

ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪದವು ಗ್ರಾಮದ ಕೈಲಾಸ ಕಾಲೋನಿ ಹತ್ತಿರ, ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದ ಹಿಂದೆ ಇರುವ ಖಾಲಿ ಜಾಗದಲ್ಲಿ ಯುವಕನೊಬ್ಬನು ಬೈಕ್‌ನಲ್ಲಿ ನಿಷೇಧಿತ MDMA ಮಾದಕ ವಸ್ತುವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಬಂದಿತ್ತು. ಇದರ ಆಧಾರದ ಮೇಲೆ ಠಾಣಾಧಿಕಾರಿ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ದಾಳಿಯ ಸಂದರ್ಭದಲ್ಲಿ ಆರೋಪಿಯಿಂದ 5.20 ಗ್ರಾಂ ತೂಕದ MDMA ಮಾದಕ ವಸ್ತು ಹಾಗೂ ಕೃತ್ಯಕ್ಕೆ ಬಳಸಿದ ಪಲ್ಸರ್ ಎನ್‌ಎಸ್ ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ ಅಂದಾಜು ರೂಪಾಯಿ 70,000/- ಆಗಿದೆ.

ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಎರ್ನಾಕುಲಂ ಮುತೊಲಪುರಂ ಚುನಯಮಕ್ಕಿಲ್ ಹೌಸ್ ನಿವಾಸಿ 20 ವರ್ಷ ಪ್ರಾಯದ ಜೂಡ್ ಮಾಥ್ಯೂ ಎಂದು ಗುರುತಿಸಲಾಗಿದೆ. ಈ ಸಂಬಂಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page