July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತಾಳ್ಮೆಯ ಮೂಲಕ ಪಡೆಯುವ ಯಶಸ್ಸನ್ನು ಯಾರೂ ತಡೆಯಲು ಸಾಧ್ಯವಿಲ್ಲ – ಸ್ಪೀಕರ್ ಯು.ಟಿ. ಖಾದರ್

ಕಾಜೂರು ಮಖಾಂ ಶರೀಫ್ ಉರೂಸ್ ಸಮಾರೋಪ ಸಮಾರಂಭದಲ್ಲಿ ಸಂದೇಶ

ತಾಳ್ಮೆಯ ಮೂಲಕ ನಾವು ಸಾಧಿಸುವ ಯಶಸ್ಸನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಹಿರಿಯರು ತೋರಿದ ತ್ಯಾಗ ಮತ್ತು ಸಹನಶೀಲತೆಯನ್ನು ಯುವಜನತೆ ಅರಿತು ಬದುಕಬೇಕು ಎಂದು ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಹೇಳಿದರು. ಜನವರಿ 25ರಂದು ಭಾನುವಾರ ನಡೆದ ಕಾಜೂರು ಮಖಾಂ ಶರೀಫ್ ಉರೂಸ್ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಧಾರ್ಮಿಕ ನಂಬಿಕೆಗಳು ದೌರ್ಬಲ್ಯವಲ್ಲ; ಅವು ನಮ್ಮ ಮಣ್ಣಿನ ಶಕ್ತಿ. ಪ್ರತಿಯೊಬ್ಬರ ಧರ್ಮವೂ ಇನ್ನೊಬ್ಬರಿಗೆ ನೋವು ನೀಡುವ ಕತ್ತಿಯಾಗದೆ, ಗಾಯಗಳನ್ನು ಗುಣಪಡಿಸುವ ಮುಲಾಮಾಗಬೇಕು ಎಂದು ಅಭಿಪ್ರಾಯಪಟ್ಟರು.

ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷ ಎನ್‌ಕೆಎಂ ಶಾಫಿ ಸ‌ಅದಿ ಮಾತನಾಡಿ, ಧಾರ್ಮಿಕತೆ ಮತ್ತು ಆಧ್ಯಾತ್ಮಿಕತೆ ನಮ್ಮ ಶಕ್ತಿಯಾಗಬೇಕು. ಕೇವಲ ಭೌತಿಕ ವಿಚಾರಗಳ ಚೌಕಟ್ಟಿನಲ್ಲಿ ಸೀಮಿತವಾದ ಬದುಕಿನಿಂದ ಸಮುದಾಯದ ಸಮಸ್ಯೆಗಳು ಸಮಸ್ಯೆಗಳಾಗಿಯೇ ಉಳಿಯುತ್ತಿವೆ ಎಂದರು.

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಕೊಡ್ಲಿಪೇಟೆ ಮಾತನಾಡಿ, ಕಾಜೂರು ವಿದ್ಯಾಭ್ಯಾಸ ಕ್ಷೇತ್ರದಲ್ಲಿ ಮುನ್ನಡೆಯುತ್ತಿದೆ. ಸರಕಾರದ ವಸತಿ ಶಾಲೆಗಳು, ಉನ್ನತ ಶಿಕ್ಷಣಕ್ಕೆ ಇರುವ ಪ್ರೋತ್ಸಾಹಗಳು, ಸ್ಕಾಲರ್‌ಶಿಪ್‌ಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು. 2014ರಿಂದ ಇಸ್ಲಾಂನ ತಪ್ಪು ವ್ಯಾಖ್ಯಾನ ಹೆಚ್ಚಾಗಿದ್ದು, ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಅದನ್ನು ಎದುರಿಸುವ ಶಕ್ತಿ ಸಮಾಜಕ್ಕಿರಬೇಕು ಎಂದು ಹೇಳಿದರು.

ಶಿಕ್ಷಣ ತಜ್ಞ ಡಾ. ಎಂ.ಎಸ್.ಎಂ. ಅಬ್ದುರ್ರಶೀದ್ ಝೈನಿ ಸಖಾಫಿ ಮಾತನಾಡಿ, ಅರಿವು ಎಂದರೆ ಕೇವಲ ಅಕ್ಷರಜ್ಞಾನವಲ್ಲ. ಶಿಕ್ಷಣಕ್ಕಿಂತ ನೈತಿಕ ಪ್ರಗತಿ ಬಹುಮುಖ್ಯ. ತಂತ್ರಜ್ಞಾನದಿಂದ ಮಾಹಿತಿ ಸಿಕ್ಕರೂ ಮಾನವೀಯ ಮೌಲ್ಯಗಳಿಲ್ಲದೆ ಪ್ರಯೋಜನವಿಲ್ಲ ಎಂದರು.

ವಿದ್ವಾಂಸ ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು ಮಾತನಾಡಿ, ಮತೀಯತೆ ಮತ್ತು ಮಾದಕತೆ ವೇಗವಾಗಿ ಹರಡುತ್ತಿದೆ. ಇದಕ್ಕೆ ಎಚ್ಚರ ವಹಿಸಿ, ಎಲ್ಲರನ್ನು ಪ್ರೀತಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮವನ್ನು ವಕ್ಫ್ ನಿಕಟ ಪೂರ್ವಾಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್ ನಡೆಸಿಕೊಟ್ಟರು. ಮಾಜಿ ಸಚಿವ ಬಿ. ರಾಮನಾಥ ರೈ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಮಾಜಿ ಶಾಸಕ ಮೊಯಿದಿನ್ ಬಾವಾ ಸೇರಿದಂತೆ ಹಲವರು ಉಪಸ್ಥಿತರಿದ್ದು ಮಾತನಾಡಿದರು. ಸಯ್ಯಿದ್ ಕಾಜೂರು ತಂಙಳ್ ನೇತೃತ್ವದಲ್ಲಿ ವಿಶೇಷ ದುಆ ಪ್ರಾರ್ಥನೆ ನಡೆಯಿತು.

ಉರೂಸ್ ಸಮಿತಿ ಅಧ್ಯಕ್ಷ ಕೆ.ಯು. ಇಬ್ರಾಹಿಂ ಸ್ವಾಗತಿಸಿ, ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಜೆ.ಹೆಚ್. ಅಬೂಬಕ್ಕರ್ ಸಿದ್ದೀಕ್ ವಂದಿಸಿದರು.

You may also like

News

Father Muller Principal Wins Prestigious Global Young Investigator Award at MASCC/ISOO Congress in Australia

In a moment of immense pride for the nation and the physiotherapy fraternity, Prof. Cherishma Dsilva, Principal of Father Muller
News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ

You cannot copy content of this page