August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೀ ಗುಡ್ ಡು ಗುಡ್ ರಾಷ್ಟ್ರವ್ಯಾಪಿ ಅಭಿಯಾನದಲ್ಲಿ ಮೂಡುಬಿದಿರೆಯ ಲೇಖಕಿ ರೆಶೆಲ್ ಫೆರ್ನಾಂಡಿಸ್ ಉಪನ್ಯಾಸ

ಮೂಡುಬಿದಿರೆಯ ಖ್ಯಾತ ಲೇಖಕಿ, ಎಬಿವಿಪಿ ಸದಸ್ಯೆ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತೆ ರೆಶೆಲ್ ಫೆರ್ನಾಂಡಿಸ್ ಅವರು ಇತ್ತೀಚೆಗೆ ಸಮರ್ಥ ಭಾರತ ಸಂಸ್ಥೆ ಆಯೋಜಿಸಿರುವ ಸ್ವಾಮಿ ವಿವೇಕಾನಂದರ ಕುರಿತಾದ ರಾಷ್ಟ್ರವ್ಯಾಪಿ ಯುವ ಅಭಿಯಾನದ ಅಂಗವಾಗಿ ನಡೆದ ‘ಬೀ ಗುಡ್ ಡು ಗುಡ್ ಆನ್‌ಲೈನ್ ಉಪನ್ಯಾಸ ಸರಣಿಯಲ್ಲಿ ಮಾತನಾಡಿದರು.

ನೇರ ಪ್ರಸಾರದಲ್ಲಿ ಮಾತನಾಡಿದ ರೆಶೆಲ್ ಫೆರ್ನಾಂಡಿಸ್ ಅವರು, ಸ್ವಾಮಿ ವಿವೇಕಾನಂದರ ಆದರ್ಶಗಳು ದೇಶದ ಯುವಜನತೆಗೆ ಹೇಗೆ ಮಾರ್ಗದರ್ಶಿಯಾಗಬಲ್ಲವು ಎಂಬುದನ್ನು ವಿವರಿಸಿದರು. ವ್ಯಕ್ತಿತ್ವ ವಿಕಾಸ, ದೇಶಭಕ್ತಿ, ಆತ್ಮವಿಶ್ವಾಸ, ಸಾಮಾಜಿಕ ಹೊಣೆಗಾರಿಕೆ ಹಾಗೂ ಮೌಲ್ಯಾಧಾರಿತ ಬದುಕು ರೂಪಿಸಿಕೊಳ್ಳುವಲ್ಲಿ ಸ್ವಾಮಿ ವಿವೇಕಾನಂದರ ಚಿಂತನೆಗಳ ಮಹತ್ವವನ್ನು ಅವರು ಸ್ಪಷ್ಟವಾಗಿ ಮಂಡಿಸಿದರು.

ಯುವಕರು ಸ್ವಾಮಿ ವಿವೇಕಾನಂದರ ಸಂದೇಶಗಳನ್ನು ಅಳವಡಿಸಿಕೊಂಡರೆ, ಅವರು ಕೇವಲ ಯಶಸ್ವಿ ವ್ಯಕ್ತಿಗಳಾಗುವುದಲ್ಲದೆ ದೇಶ ಮತ್ತು ಸಮಾಜಕ್ಕೆ ಮಾದರಿಯಾದ ನಾಗರಿಕರಾಗಿ ರೂಪುಗೊಳ್ಳಬಹುದು ಎಂದು ಹೇಳಿದರು. ಈ ‘ಬೀ ಗುಡ್ ಡು ಗುಡ್ ರಾಷ್ಟ್ರವ್ಯಾಪಿ ಅಭಿಯಾನದಲ್ಲಿ ದೇಶ ಹಾಗೂ ವಿದೇಶಗಳ ವಿವಿಧ ಕ್ಷೇತ್ರಗಳ ಗಣ್ಯ ವ್ಯಕ್ತಿಗಳನ್ನು ಉಪನ್ಯಾಸಕ್ಕೆ ಆಹ್ವಾನಿಸಲಾಗಿದ್ದು, ಯುವಜನತೆಯಲ್ಲಿ ಸಕಾರಾತ್ಮಕ ಚಿಂತನೆ ಮತ್ತು ರಾಷ್ಟ್ರಸೇವೆಯ ಮನೋಭಾವ ಬೆಳೆಸುವ ಉದ್ದೇಶ ಹೊಂದಿದೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page