August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕುಳಾಯಿ ದೈವಸ್ಥಾನ ಮನೆ ಕಳ್ಳತನ ಪ್ರಕರಣ ಭೇದಿಸಿದ ಸುರತ್ಕಲ್ ಪೊಲೀಸರು

ರೂಪಾಯಿ 1.95 ಲಕ್ಷ ಮೌಲ್ಯದ ಪೂಜಾ ಸಾಮಗ್ರಿ ವಶ, ಇಬ್ಬರ ಬಂಧನ

ಕುಳಾಯಿ ಗ್ರಾಮದ ಖಾಲಿ ಮನೆಯಲ್ಲಿದ್ದ ದೈವಗಳ ಮೂರ್ತಿಗಳು ಹಾಗೂ ಪೂಜಾ ಪರಿಕರಗಳನ್ನು ಕಳವು ಮಾಡಿದ್ದ ಪ್ರಕರಣವನ್ನು ಸುರತ್ಕಲ್ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿತರನ್ನು ಬಂಧಿಸಿ ಸುಮಾರು ರೂಪಾಯಿ 1.95 ಲಕ್ಷ ಮೌಲ್ಯದ ಕಳ್ಳತನದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕುಳಾಯಿ ಗ್ರಾಮದ ಯಶೋದ ಕ್ಲಿನಿಕ್ ಸಮೀಪದ ಮನೆ ನಂ.6-177ರಲ್ಲಿ ವಾಸವಿರುವ 43 ವರ್ಷ ಪ್ರಾಯದ ಅಮಿತಾ, ಗಂಡ: ಸುರೇಶ್ ಅವರ ತಾಯಿ ಮನೆಯಲ್ಲಿದ್ದ ದೈವಗಳ ಮೂರ್ತಿಗಳು ಹಾಗೂ ಪೂಜಾ ಸಾಮಗ್ರಿಗಳನ್ನು ದಿನಾಂಕ 26-12-2025ರ ರಾತ್ರಿ ಅಪರಿಚಿತರು ಮೇಲ್ಚಾವಣಿಯ ಹಂಚು ತೆಗೆದು ಒಳನುಗ್ಗಿ ಕಳವು ಮಾಡಿದ್ದರು. ಈ ಕುರಿತು ದಿನಾಂಕ 27-12-2025ರಂದು ಸುರತ್ಕಲ್ ಠಾಣೆಯಲ್ಲಿ ಅ.ಕ್ರ.170/2025 ಕಲಂ 331(4), 305(ಎ) ಬಿ.ಎನ್.ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸರು ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ತನಿಖೆ ನಡೆಸಿ 27 ವರ್ಷ ಪ್ರಾಯದ ವಾಜೀದ್ ಜೆ @ ವಾಜಿ ಎಂಬಾತನನ್ನು ಬಂಧಿಸಿದರು. ವಿಚಾರಣೆಯಲ್ಲಿ ಕಳವು ಮಾಡಿದ ಹಿತ್ತಾಳೆ ಹಾಗೂ ತಾಮ್ರದ ಸಾಮಗ್ರಿಗಳನ್ನು ಜೋಕಟ್ಟೆಯ ಸಯ್ಯದ್ ಆಲಿ ಎಂಬಾತನಿಗೆ ಮಾರಾಟ ಮಾಡಿರುವುದಾಗಿ ತಿಳಿದುಬಂದ ಹಿನ್ನೆಲೆಯಲ್ಲಿ ದಿನಾಂಕ 27-01-2026ರಂದು ಸಯ್ಯದ್ ಆಲಿಯನ್ನೂ ಬಂಧಿಸಲಾಗಿದೆ.

ಆರೋಪಿತರಿಂದ ಬೆಳ್ಳಿಯ ಮಂತ್ರದೇವತೆಯ ಮೂರ್ತಿ, ಕಡ್ಸಲೆ, ಕೊಡೆ ಸೇರಿದಂತೆ ರೂಪಾಯಿ 1,95,000 ಮೌಲ್ಯದ ಬೆಳ್ಳಿ ಸಾಮಗ್ರಿ, ಹಿತ್ತಾಳೆ ಹಾಗೂ ತಾಮ್ರದ ಪೂಜಾ ಪರಿಕರಗಳು, ಟಿವಿ–ಸೆಟ್‌ಟಾಪ್ ಬಾಕ್ಸ್, ಎರಡು ಮೊಬೈಲ್ ಫೋನ್‌ಗಳು ಹಾಗೂ ಕಾವೂರು ಠಾಣಾ ವ್ಯಾಪ್ತಿಯಲ್ಲಿ ಕಳ್ಳತನವಾದ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ.

ಪ್ರಮುಖ ಆರೋಪಿಯಾದ ವಾಜೀದ್ ಜೆ @ ವಾಜಿ ಮೇಲೆ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಕೊಲೆ ಯತ್ನ, ದರೋಡೆ, ಮನೆ ಕಳ್ಳತನ, ವಾಹನ ಕಳ್ಳತನ ಸೇರಿ ಅನೇಕ ಪ್ರಕರಣಗಳು ದಾಖಲಾಗಿದ್ದು, ಸುರತ್ಕಲ್ ಠಾಣೆಯಲ್ಲಿ ‘ಬಿ’ ರೌಡಿ ಶೀಟ್ ಮತ್ತು ಎಂಒಬಿ ತೆರೆಯಲಾಗಿದೆ. ನ್ಯಾಯಾಲಯದ ದಸ್ತಗಿರಿ ವಾರಂಟ್ ಜಾರಿಯಲ್ಲಿದ್ದ ಈತನನ್ನು ದಿನಾಂಕ 28-01-2026ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page