August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೆಡಿಕಲ್ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ – ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಜೀವಾಂತ್ಯ

ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಧಾರವಾಡದಲ್ಲಿ ಸಂಭವಿಸಿದೆ.

ಧಾರವಾಡದ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯ ಸೈಕಿಯಾಟ್ರಿಕ್ ಪಿಜಿ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿ ಶಿವಮೊಗ್ಗ ಮೂಲದ ಡಾ. ಪ್ರಜ್ಞಾ ಪಾಲೇಗರ್ ಮೃತರಾಗಿದ್ದಾರೆ. ಡಾ. ಪ್ರಜ್ಞಾ ಅವರು ಕೇವಲ ಎರಡು ವಾರಗಳ ಹಿಂದಷ್ಟೇ ಪಿಜಿ ತರಬೇತಿಗಾಗಿ ಧಾರವಾಡಕ್ಕೆ ಆಗಮಿಸಿದ್ದರು.

ನಿನ್ನೆ ಆಕೆಯ ಪೋಷಕರು ಸಂಸ್ಥೆಗೆ ಬಂದು ಪುತ್ರಿಯೊಂದಿಗೆ ಮಾತನಾಡಿಕೊಂಡು ಹಿಂತಿರುಗಿದ್ದರೆಂದು ತಿಳಿದುಬಂದಿದೆ. ಪೋಷಕರು ಹೊರಟ ಕೆಲವೇ ಗಂಟೆಗಳಲ್ಲಿ ಡಾ. ಪ್ರಜ್ಞಾ ಅವರು ದುಡುಕಿನ ನಿರ್ಧಾರ ಕೈಗೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟನೆ ಕುರಿತು ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page