August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೈಂಟ್ ಅಲೋಶಿಯಸ್ ವಿವಿಯಲ್ಲಿ ‘ಸ್ವರಾಂಜಲಿ’ ಸಂಗೀತ ಕಚೇರಿ

ಫೆಬ್ರವರಿ 1ರಂದು ಆಧ್ಯಾತ್ಮಿಕಸಮಕಾಲೀನ ಸಂಗೀತ ಸಂಭ್ರಮ

ಮಂಗಳೂರಿನ ಸೈಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಲ್ಲಿ ಫೆಬ್ರವರಿ 1ರಂದು ಭಾನುವಾರ ಸಂಜೆ 5 ಗಂಟೆಗೆ ವಿಶ್ವವಿದ್ಯಾಲಯದ ಎಲ್.ಎಫ್. ರಸ್ಕಿನ್ಹಾ ಸಭಾಂಗಣದಲ್ಲಿ ‘ಸ್ವರಾಂಜಲಿ’ — ಆಧ್ಯಾತ್ಮಿಕ ಮತ್ತು ಸಮಕಾಲೀನ ಸಂಗೀತದ ಗಾಯನ ಹಾಗೂ ವಾದ್ಯವೃಂದದ ಭವ್ಯ ಸಂಗೀತ ಕಚೇರಿ ಆಯೋಜಿಸಲಾಗುತ್ತಿದೆ.

ಕಾರ್ಯಕ್ರಮದ ಪೋಷಕರಾಗಿ ಸಂತ ಅಲೋಶಿಯಸ್ ಸಂಸ್ಥೆಗಳ ರೆಕ್ಟರ್ ರೆ. ಫಾ. ಮೆಲ್ವಿನ್ ಜೋಸೆಫ್ ಪಿಂಟೊ, ಎಸ್.ಜೆ. ಹಾಗೂ ಅಲೋಶಿಯಸ್ ವಿಶ್ವವಿದ್ಯಾಲಯದ ಕುಲಪತಿ ವಂದನೀಯ ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ. ಉಪಸ್ಥಿತಲಿರುವರು. ವಿವಿಧ ಬ್ಲಾಕ್‌ಗಳ ನಿರ್ದೇಶಕರು, ಡೀನ್‌ಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಸಂಗೀತಾಸಕ್ತ ಸಾರ್ವಜನಿಕರು ಈ ಸಂಗೀತ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮಂಗಳೂರಿನ ಪ್ರಮುಖ ಗಾಯಕವೃಂದಗಳು ಹಾಗೂ ಆರ್ಕೆಸ್ಟ್ರಾಗಳಾದ ಬಲ್ಮಟ ಮ್ಯೂಸಿಕಲ್ ಅಸೋಸಿಯೇಷನ್, ಸೈಂಟ್ ಜೋಸೆಫ್ಸ್ ಸೆಮಿನರಿ, ಸಿಎಸ್‌ಐ ಯಂಗ್ ವಾಯ್ಸಸ್, ಆಶಾ ಕಿರಣ್, NEPAM, ಸೈಂಟ್ ಅಲೋಶಿಯಸ್ ಪಿಯು ಕಾಲೇಜು ತಂಡ ಹಾಗೂ ಸೈಂಟ್ ಅಲೋಶಿಯಸ್ ವಿಶ್ವವಿದ್ಯಾಲಯ ತಂಡಗಳು ಭಾಗವಹಿಸಲಿವೆ. ಜೊತೆಗೆ ರಾಚೆಲ್ ಪ್ರಿಯಾಂಕಾ ಫುರ್ಟಾಡೊ ಮತ್ತು ಅನನ್ಯಾ ಅಭಿಗೈಲ್ ಡಿಸಿಲ್ವಾ ಅವರ ವಿಶೇಷ ಗಾಯನ ಪ್ರಸ್ತುತಿ ಸಂಗೀತಾಸಕ್ತರನ್ನು ಮನಸೂರೆಗೊಳಿಸಲಿದೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page