May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೈಂಟ್ ಅಲೋಶಿಯಸ್ ವಿವಿಯಲ್ಲಿ ‘ಸ್ವರಾಂಜಲಿ’ ಸಂಗೀತ ಕಚೇರಿ

ಫೆಬ್ರವರಿ 1ರಂದು ಆಧ್ಯಾತ್ಮಿಕಸಮಕಾಲೀನ ಸಂಗೀತ ಸಂಭ್ರಮ

ಮಂಗಳೂರಿನ ಸೈಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಲ್ಲಿ ಫೆಬ್ರವರಿ 1ರಂದು ಭಾನುವಾರ ಸಂಜೆ 5 ಗಂಟೆಗೆ ವಿಶ್ವವಿದ್ಯಾಲಯದ ಎಲ್.ಎಫ್. ರಸ್ಕಿನ್ಹಾ ಸಭಾಂಗಣದಲ್ಲಿ ‘ಸ್ವರಾಂಜಲಿ’ — ಆಧ್ಯಾತ್ಮಿಕ ಮತ್ತು ಸಮಕಾಲೀನ ಸಂಗೀತದ ಗಾಯನ ಹಾಗೂ ವಾದ್ಯವೃಂದದ ಭವ್ಯ ಸಂಗೀತ ಕಚೇರಿ ಆಯೋಜಿಸಲಾಗುತ್ತಿದೆ.

ಕಾರ್ಯಕ್ರಮದ ಪೋಷಕರಾಗಿ ಸಂತ ಅಲೋಶಿಯಸ್ ಸಂಸ್ಥೆಗಳ ರೆಕ್ಟರ್ ರೆ. ಫಾ. ಮೆಲ್ವಿನ್ ಜೋಸೆಫ್ ಪಿಂಟೊ, ಎಸ್.ಜೆ. ಹಾಗೂ ಅಲೋಶಿಯಸ್ ವಿಶ್ವವಿದ್ಯಾಲಯದ ಕುಲಪತಿ ವಂದನೀಯ ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ. ಉಪಸ್ಥಿತಲಿರುವರು. ವಿವಿಧ ಬ್ಲಾಕ್‌ಗಳ ನಿರ್ದೇಶಕರು, ಡೀನ್‌ಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಸಂಗೀತಾಸಕ್ತ ಸಾರ್ವಜನಿಕರು ಈ ಸಂಗೀತ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮಂಗಳೂರಿನ ಪ್ರಮುಖ ಗಾಯಕವೃಂದಗಳು ಹಾಗೂ ಆರ್ಕೆಸ್ಟ್ರಾಗಳಾದ ಬಲ್ಮಟ ಮ್ಯೂಸಿಕಲ್ ಅಸೋಸಿಯೇಷನ್, ಸೈಂಟ್ ಜೋಸೆಫ್ಸ್ ಸೆಮಿನರಿ, ಸಿಎಸ್‌ಐ ಯಂಗ್ ವಾಯ್ಸಸ್, ಆಶಾ ಕಿರಣ್, NEPAM, ಸೈಂಟ್ ಅಲೋಶಿಯಸ್ ಪಿಯು ಕಾಲೇಜು ತಂಡ ಹಾಗೂ ಸೈಂಟ್ ಅಲೋಶಿಯಸ್ ವಿಶ್ವವಿದ್ಯಾಲಯ ತಂಡಗಳು ಭಾಗವಹಿಸಲಿವೆ. ಜೊತೆಗೆ ರಾಚೆಲ್ ಪ್ರಿಯಾಂಕಾ ಫುರ್ಟಾಡೊ ಮತ್ತು ಅನನ್ಯಾ ಅಭಿಗೈಲ್ ಡಿಸಿಲ್ವಾ ಅವರ ವಿಶೇಷ ಗಾಯನ ಪ್ರಸ್ತುತಿ ಸಂಗೀತಾಸಕ್ತರನ್ನು ಮನಸೂರೆಗೊಳಿಸಲಿದೆ.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page