May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಂಗನವಾಡಿ ಶಿಕ್ಷಕಿಯರಿಗೆ ವಿಕಲಚೇತನರ ಕುರಿತು ಅರಿವು ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ – ಮಂಗಳೂರು ನಗರ ಪದವು ಇವರ ಆಶ್ರಯದಲ್ಲಿ ಶಕ್ತಿನಗರ ಅಂಗನವಾಡಿ ಕೇಂದ್ರದಲ್ಲಿ ವಿಕಲಚೇತನರ ಕುರಿತು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ವೆರೋನಿಕಾ ವಿಹಾರ್ ಘಟಕ (ವಿಶೇಷ ಚೇತನ ಹಿರಿಯ ನಾಗರಿಕರ ಪುನರ್ವಸತಿ ನಿಲಯ) ಹಾಗೂ ಕಾರ್ಮೆಲ್ ಸೇವಾ ಟ್ರಸ್ಟ್, ಮಂಗಳೂರು ಇವರ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಿತು.

ಜನವರಿ 27ರಂದು ಮಂಗಳವಾರ ಶಕ್ತಿನಗರ ವಲಯದ 28 ಮಂದಿ ಹಾಗೂ ಜನವರಿ 28ರಂದು ಬುಧವಾರ ಕೊಟ್ಟಾರ ಚೌಕಿ ವಲಯದ 15 ಮಂದಿ ಅಂಗನವಾಡಿ ಶಿಕ್ಷಕಿಯರಿಗೆ ವಿಕಲಚೇತನರ ಕುರಿತು ಸಂಪನ್ಮೂಲ ವ್ಯಕ್ತಿ ಪ್ರಿಯಾ ಡಿಕ್ರುಜ್ ಅವರು ಅರಿವು ಮೂಡಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸಿಂಧು ಅವರು ಎಲ್ಲರಿಗೂ ಸ್ವಾಗತಿಸಿದರು. ಕಾರ್ಮೆಲ್ ಸೇವಾ ಟ್ರಸ್ಟ್‌ನ ಪ್ರೊಜೆಕ್ಟ್ ಮ್ಯಾನೇಜರ್ ಹಾಗೂ ಸಂಯೋಜಕಿ ಸಿಸ್ಟರ್ ಫ್ರೀಡಾ ಅವರು ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿ ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಯಾದ ಪ್ರಿಯಾ ಡಿಕ್ರುಜ್ ಅವರು ಅಂಗವಿಕಲತೆಯ ಅರ್ಥ, ಅದರ ಲಕ್ಷಣಗಳು, ಕಾರಣಗಳು ಹಾಗೂ ಸರಕಾರದಿಂದ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ, ತಮ್ಮ ವಿಕಲಚೇತನ ಮಗುವಿನ ಲಾಲನೆ–ಪೋಷಣೆಯ ಅನುಭವಗಳನ್ನು ಹಂಚಿಕೊಂಡು, ಅಂಗವಿಕಲತೆಯನ್ನು ಹೇಗೆ ತಡೆಗಟ್ಟಬಹುದು ಎಂಬುದರ ಕುರಿತು ಜಾಗೃತಿ ಮೂಡಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ ಅಂಗನವಾಡಿ ಶಿಕ್ಷಕಿಯರು ವಂದಿಸಿದರು.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page