August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುತ್ತೂರು ಬಳಿ ಕಾರು ತಡೆಗೋಡೆಗೆ ಡಿಕ್ಕಿ – ಬೆಂಕಿಗೆ ಆಹುತಿಯಾದ ವಾಹನ

ಪ್ರಾಣಾಪಾಯದಿಂದ ತಪ್ಪಿದ ಪ್ರಯಾಣಿಕರು

ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಕಾರೊಂದು ರಸ್ತೆ ಬದಿ ಕಾಂಕ್ರೀಟ್ ತಡೆಗೋಡೆಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಹೋಗಿರುವ ಘಟನೆ ಜನವರಿ 30ರಂದು ಶುಕ್ರವಾರ ಮಧ್ಯಾಹ್ನ ನಡೆದಿದೆ.

ದಿನಾಂಕ 30.01.2026 ರಂದು ಮಧ್ಯಾಹ್ನ 1.30 ಗಂಟೆ ಸುಮಾರಿಗೆ KA-05-NN-8222 ಸಂಖ್ಯೆಯ ಕಾರನ್ನು ಬೆಂಗಳೂರಿನ ರಾಜಾಜಿನಗರದ 29 ವರ್ಷ ಪ್ರಾಯದ ಹರ್ಷಿತ್ ಜಿ. ಅವರು ಚಾಲನೆ ಮಾಡುತ್ತಿದ್ದರು. ಅಜಾಗರೂಕ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಾಲನೆ ಮಾಡಿದ ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ತಕ್ಷಣವೇ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.

ಘಟನೆಯ ಸಮಯದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ. ಸ್ಥಳೀಯರು ಹಾಗೂ ಸಂಚಾರ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದರು. ಈ ಕುರಿತು ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಸ್ವಯಂ ದೂರು ದಾಖಲಿಸಿಕೊಂಡು ಅಕ್ರಮ ಸಂಖ್ಯೆ 19/2026 ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ ಕಲಂ 281 ಬಿ.ಎನ್‌.ಎಸ್. ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page