July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಜ್ಜ–ಅಜ್ಜಿ ಮತ್ತು ಪೋಷಕರಿಗೆ ಗೌರವ ಸಲ್ಲಿಸಿದ ಬಜ್ಪೆಯ ಬೆಥನಿ ಶಾಲೆ

“ಅಜ್ಜ–ಅಜ್ಜಿ ನಮ್ಮ ಕುಟುಂಬದ ಬೇರುಗಳು; ಪೋಷಕರು ನಮ್ಮ ಜೀವನದ ದಾರಿದೀಪಗಳು” ಎಂಬ ಸಾರ್ಥಕ ಸಂದೇಶದೊಂದಿಗೆ ಬಜ್ಪೆಯ ಬೆಥನಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಅಜ್ಜ–ಅಜ್ಜಿ ದಿನ ಹಾಗೂ ಪೋಷಕರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಜ್ಜ–ಅಜ್ಜಿ ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಕಳೆ ತುಂಬಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕ್ಲೆಟ್ಟಾ ಟ್ರೆಸ್ಸಿ ಡಿಕುನ್ಹಾ ಅವರು ಭಾಗವಹಿಸಿ, ಮಕ್ಕಳ ಜೀವನದಲ್ಲಿ ಅಜ್ಜ–ಅಜ್ಜಿ ಮತ್ತು ಪೋಷಕರು ವಹಿಸುವ ಮಹತ್ವದ ಪಾತ್ರವನ್ನು ವಿವರಿಸಿದರು. ಕುಟುಂಬ ಮೌಲ್ಯಗಳ ಅಗತ್ಯತೆ ಹಾಗೂ ಸಂಸ್ಕಾರದ ಮಹತ್ವವನ್ನು ಅವರು ವಿಶೇಷವಾಗಿ ಒತ್ತಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ವಂದನೀಯ ಭಗಿನಿ ವೀಣಾ ಡಿಸೋಜ ಅವರು ಮಾತನಾಡಿ, ಅಜ್ಜ–ಅಜ್ಜಿ ಹಾಗೂ ಪೋಷಕರ ಆಶೀರ್ವಾದ ಮತ್ತು ಮಾರ್ಗದರ್ಶನವೇ ಮಕ್ಕಳ ಯಶಸ್ಸಿನ ಮೂಲವಾಗಿದ್ದು, ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಪೋಷಕರ ಸಹಕಾರ ಅತ್ಯಂತ ಅಗತ್ಯವೆಂದು ತಿಳಿಸಿದರು.

ಕಾರ್ಯಕ್ರಮವನ್ನು ಶಾಲಾ ಸಹ ಶಿಕ್ಷಕರಾದ ವಿಲ್ಮಾ ಹಾಗೂ ಅನ್ಸಿಲ್ ಅವರು ಸಮರ್ಥವಾಗಿ ನಿರೂಪಿಸಿದರು. ಆಗಮಿಸಿದ ಎಲ್ಲ ಅತಿಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು ಆತ್ಮೀಯವಾಗಿ ಸ್ವಾಗತಿಸಿದರು. ವಾಣಿ ಅವರು ಧನ್ಯವಾದ ಸಮರ್ಪಣೆಯೊಂದಿಗೆ ಕಾರ್ಯಕ್ರಮಕ್ಕೆ ಪೂರ್ಣ ವಿರಾಮ ನೀಡಿದರು.

You may also like

News

Father Muller Principal Wins Prestigious Global Young Investigator Award at MASCC/ISOO Congress in Australia

In a moment of immense pride for the nation and the physiotherapy fraternity, Prof. Cherishma Dsilva, Principal of Father Muller
News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ

You cannot copy content of this page