May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಕ್ಷಿಕೆರೆ ಸಂತ ಜೂಡರ ಪುಣ್ಯಕ್ಷೇತ್ರದಲ್ಲಿ ಆಧ್ಯಾತ್ಮಿಕ ಧ್ಯಾನಕೂಟ – ಹರಿದು ಬಂದ ಜನಸಾಗರ

ನಾಳೆ ಫೆಬ್ರವರಿ 8ರಂದು ಸಂಪನ್ನ

ಮಂಗಳೂರಿನ ಶಾಲೋಮ್ ಪ್ರೇಯರ್ ಮಿನಿಸ್ಟ್ರಿ ಸಹಯೋಗ

ಪಕ್ಷಿಕೆರೆ ಇಲ್ಲಿನ ಪ್ರಸಿದ್ಧ ಸಂತ ಜೂಡರ ಚರ್ಚ್ ಹಾಗೂ ಪುಣ್ಯಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳ ವಿಶೇಷ ಆಧ್ಯಾತ್ಮಿಕ ಧ್ಯಾನಕೂಟವು ನಾಳೆ ಫೆಬ್ರವರಿ 8ರಂದು ಭಾನುವಾರ ಅತ್ಯಂತ ಭಕ್ತಿಪೂರ್ವಕವಾಗಿ ಮುಕ್ತಾಯಗೊಳ್ಳಲಿದೆ.

ಫೆಬ್ರವರಿ 6ರಿಂದ ಪ್ರಾರಂಭವಾದ ಈ ಧ್ಯಾನಕೂಟವು ಭಾನುವಾರ ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ನಡೆಯುವ ವಿಶೇಷ ಪ್ರಾರ್ಥನೆಯೊಂದಿಗೆ ಮಕ್ತಾಯವಾಗಲಿದೆ. ದಶಮಾನೋತ್ಸವದ ಸಂಭ್ರಮದಲ್ಲಿರುವ ಮಂಗಳೂರಿನ ಶಾಲೋಮ್ ಪ್ರೇಯರ್ ಮಿನಿಸ್ಟ್ರಿ ಸಹಯೋಗದೊಂದಿಗೆ, ಸಂತ ಜೂಡರ ಪುಣ್ಯಕ್ಷೇತ್ರದ ವತಿಯಿಂದ ಈ ಧ್ಯಾನಕೂಟವನ್ನು ಆಯೋಜಿಸಲಾಗಿತ್ತು.

ಧ್ಯಾನಕೂಟದ ಪ್ರಮುಖಾಂಶಗಳು:

* ನೇತೃತ್ವ – ಪುಣ್ಯಕ್ಷೇತ್ರದ ಧರ್ಮಗುರುಗಳಾದ ವಂದನೀಯ ಫಾದರ್ ಅನಿಲ್ ಆಲ್ಫ್ರೆಡ್ ಡಿಸೋಜ ಅವರ ನೇತೃತ್ವದಲ್ಲಿ ಧ್ಯಾನಕೂಟ ಪ್ರಾರಂಭವಾಯಿತು.

* ಪ್ರವಚನಕಾರರು – ಅಂತರಾಷ್ಟ್ರೀಯ ಖ್ಯಾತಿಯ ಪ್ರವಚನಕಾರ ವಂದನೀಯ ಡಾ. ಆಗಸ್ಟಿನ್ ವಲ್ಲೂರನ್ ವಿ.ಸಿ. ಅವರು ಮುಖ್ಯ ಪ್ರವಚನ ನೀಡುತ್ತಿದ್ದಾರೆ. ಅವರ ತಂಡದ ಸದಸ್ಯರಾದ ಗ್ಲೆನ್ ಲಾರೆನ್ಸ್, ತೆರೇಸಾ ಲಾರೆನ್ಸ್, ಮರಿಯಾ ಸಂಗೀತ, ಡಾ. ದೀಪು ಹರಿಹರ್ ಮತ್ತು ಮನಿಷಾ ಮಥಾಯಸ್ ಅವರು ಧ್ಯಾನ ನಡೆಸಿಕೊಡುತ್ತಿದ್ದಾರೆ.

* ದೈವ ಸಂದೇಶ – “ದೇವರು ಎಂದರೆ ದಯೆ ತೋರಿಸಿ ಪ್ರೀತಿಸುವ ವ್ಯಕ್ತಿತ್ವ” ಎಂಬ ವಿಷಯದ ಮೇಲೆ ಬೆಳಕು ಚೆಲ್ಲಿದ ವಂದನೀಯ ಡಾ. ಆಗಸ್ಟಿನ್ ವಲ್ಲೂರನ್ ಅವರು, “ಸಾಮಾನ್ಯವಾಗಿ ತಪ್ಪು ಮಾಡಿದವರಿಗೆ ಶಿಕ್ಷೆ ನೀಡುವುದು ಜಗದ ನಿಯಮ, ಆದರೆ ದೇವರು ತಪ್ಪು ಮಾಡಿದವರನ್ನೇ ಹುಡುಕಿ ಪ್ರೀತಿಯಿಂದ ಅಪ್ಪಿಕೊಳ್ಳುವ ದಯಾಮಯಿ” ಎಂದು ಮಾರ್ಮಿಕವಾಗಿ ನುಡಿದರು.

ಗಣ್ಯರ ಉಪಸ್ಥಿತಿ:

ಧ್ಯಾನಕೂಟದಲ್ಲಿ ಶಾಲೋಮ್ ಪ್ರೇಯರ್ ಮಿನಿಸ್ಟ್ರಿಯ ಸ್ಥಾಪಕರಾದ ಎಂ.ಪಿ. ನೊರೊನ್ಹಾ ಅವರು ಆಗಮಿಸಿದವರನ್ನು ಸ್ವಾಗತಿಸಿದರು. ಮುಕ್ಕದ ಹೊಲಿ ಸ್ಪಿರಿಟ್ ಚರ್ಚ್ ಧರ್ಮಗುರುಗಳಾದ ವಂದನೀಯ ಫಾದರ್ ಸ್ಟ್ಯಾನಿ ಪಿಂಟೊ ಅವರು ಬಲಿಪೂಜೆಯನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ಹಲವಾರು ಧರ್ಮಗುರುಗಳು, ಧರ್ಮಭಗಿನಿಯರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ದೈವಾನುಗ್ರಹಕ್ಕೆ ಪಾತ್ರರಾದರು. ನಾಳೆ ಕೊನೆಯ ದಿನ ನಡೆಯುವ ಧ್ಯಾನಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಆಯೋಜಕರಾದ ಶಾಲೋಮ್ ಪ್ರೇಯರ್ ಮಿನಿಸ್ಟ್ರಿಯ ಮುಖ್ಯಸ್ಥರು ತಿಳಿಸಿದ್ದಾರೆ.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page