May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೈಂಟ್ ಮೇರಿಸ್ ಶಾಲೆಯಲ್ಲಿ ‘ಕನ್ನಡದ ನಡಿಗೆ ಶಾಲೆಯ ಕಡೆಗೆ’ ಸಾಹಿತ್ಯ ಅಭಿಯಾನ

“ವಿದ್ಯಾರ್ಥಿ ದೆಸೆಯಲ್ಲಿಯೇ ಕನ್ನಡ ಸಾಹಿತ್ಯದ ಬಗ್ಗೆ ಒಲವು ಮತ್ತು ಆಸಕ್ತಿಯನ್ನು ಬೆಳೆಸಿಕೊಳ್ಳುವುದು ಇಂದಿನ ಅಗತ್ಯ” – ಡಾ. ವಾಮನ್ ರಾವ್ ಬೇಕಲ್

ಮಂಗಳೂರು: ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ‘ಕನ್ನಡದ ನಡಿಗೆ ಶಾಲೆಯ ಕಡೆಗೆ’ ಎಂಬ ಏಕದಿನ ಸಾಹಿತ್ಯ ಅಭಿಯಾನವು ಮಂಗಳೂರಿನ ಪಳ್ನೀರಿನ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆಬ್ರವರಿ 10ರಂದು ಮಂಗಳವಾರ ಯಶಸ್ವಿಯಾಗಿ ನಡೆಯಿತು.

ಮಧ್ಯಾಹ್ನ 2:00 ಗಂಟೆಗೆ ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾದ ರೇಖಾ ಸುದೇಶ್ ರಾವ್ ಅವರು ಎಲ್ಲರನ್ನೂ ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಸಿಂತಿಯ ಡಿಸೋಜ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರಾದ ಉಮೇಶ್ ರಾವ್ ಕುಂಬಳೆ ಅವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ಅಭಿಯಾನದ ಉದ್ದೇಶವನ್ನು ವಿವರಿಸಿದರು. ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹಿತನುಡಿಗಳನ್ನು ಹಂಚಿಕೊಂಡರು. “ವಿದ್ಯಾರ್ಥಿ ದೆಸೆಯಲ್ಲಿಯೇ ಕನ್ನಡ ಸಾಹಿತ್ಯದ ಬಗ್ಗೆ ಒಲವು ಮತ್ತು ಆಸಕ್ತಿಯನ್ನು ಬೆಳೆಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ” ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಭವನ ಕಾಸರಗೋಡಿನ ಸಂಚಾಲಕಿ ಸಂಧ್ಯಾ ರಾಣಿ ಟೀಚರ್ ಉಪಸ್ಥಿತರಿದ್ದರು. ಶಿಕ್ಷಕಿ ಲವೀನ ಅನಿಟ ಡಿಸೋಜ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ಕಾರ್ಯಕ್ರಮದ ಮುಖ್ಯಾಂಶಗಳು:

* ಸುಮಾರು 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಕವನ ವಾಚನ ಹಾಗೂ ರಸಪ್ರಶ್ನೆ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

* ಕವನ ವಾಚನ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು.

* ಇದೇ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಸಿಂತಿಯ ಡಿಸೋಜ ಹಾಗೂ ಶಿಕ್ಷಕಿ ಲವೀನ ಅನಿಟ ಡಿಸೋಜ ಅವರನ್ನು ಕನ್ನಡ ಭವನ ಜಿಲ್ಲಾ ಘಟಕದ ವತಿಯಿಂದ ಆತ್ಮೀಯವಾಗಿ ಗೌರವಿಸಲಾಯಿತು.

ಕೊನೆಯಲ್ಲಿ ಶಿಕ್ಷಕಿ ಶ್ರೀಲಕ್ಷ್ಮಿ ಕೀಕಾನ ವಂದಿಸಿದರು. ರೇಖಾ ಸುದೇಶ್ ರಾವ್ ಅವರು ಧನ್ಯವಾದ ಸಮರ್ಪಣೆ ಮಾಡಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಮಕ್ತಾಯಗೊಂಡಿತು.

 

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page