May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಥೊಲಿಕ್ ಸಭಾ ಸುರತ್ಕಲ್ ವಲಯದ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ಪ್ರದಾನ

ನಿರಂತರ ಪ್ರಯತ್ನದಿಂದ ಯಶಸ್ಸು ಸಾಧ್ಯ – ಫಾದರ್ ಆಸ್ಟಿನ್ ಪೀಟರ್ ಪೆರಿಸ್

ಸಮಾಜದಲ್ಲಿ ಯಾವುದೇ ಸಮಸ್ಯೆ ಎದುರಾದಾಗ ತಕ್ಷಣ ಸ್ಪಂದಿಸಿ, ಪರಿಹಾರ ಕಂಡುಕೊಳ್ಳುವಲ್ಲಿ ಕಥೊಲಿಕ್ ಸಭಾ ಅತ್ಯಂತ ಯಶಸ್ವಿಯಾಗಿದೆ ಎಂದು ಕಥೊಲಿಕ್ ಸಭಾ ಕೇಂದ್ರೀಯ ಸಮಿತಿಯ ಆಧ್ಯಾತ್ಮಿಕ ನಿರ್ದೇಶಕರಾದ  ವಂದನೀಯ ಡಾ. ಜೆ. ಬಿ. ಸಲ್ಡಾನಾ ಅವರು ಅಭಿಪ್ರಾಯಪಟ್ಟರು.

ಇಲ್ಲಿನ ಸಂತ ಮದರ್ ತೆರೇಸಾ ವಲಯ ಸುರತ್ಕಲ್ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಸಂದೇಶ ನೀಡಿದರು.

ನಿರಂತರ ಪ್ರಯತ್ನದಿಂದ ಯಶಸ್ಸು ಸಾಧ್ಯ – ಫಾದರ್ ಆಸ್ಟಿನ್ ಪೀಟರ್ ಪೆರಿಸ್

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸುರತ್ಕಲ್ ವಲಯದ ಶ್ರೇಷ್ಠ ಗುರು ಅತೀ ವಂದನೀಯ ಫಾದರ್ ಆಸ್ಟಿನ್ ಪೀಟರ್ ಪೆರಿಸ್ ಅವರು ಮಾತನಾಡಿ, “ಕಥೊಲಿಕ್ ಸಭಾ ಕಳೆದ ಹಲವು ವರ್ಷಗಳಿಂದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಜನರ ಪ್ರೀತಿಗೆ ಪಾತ್ರವಾಗಿದೆ. ಕಷ್ಟಪಡದೆ ಯಶಸ್ಸು ಗಳಿಸಲು ಅಸಾಧ್ಯ. ಯಶಸ್ಸಿನ ಮೆಟ್ಟಿಲುಗಳನ್ನು ಹತ್ತಲು ವಿದ್ಯಾರ್ಥಿಗಳಿಗೆ ನಿರಂತರ ಪ್ರಯತ್ನ ಮತ್ತು ದೇವರ ಆಶೀರ್ವಾದದ ಅಗತ್ಯವಿದೆ,” ಎಂದು ಶುಭ ಹಾರೈಸಿದರು.

ಗಣ್ಯರ ಉಪಸ್ಥಿತಿ:

ಸಂತ ಮದರ್ ತೆರೇಸಾ ವಲಯದ ಅಧ್ಯಕ್ಷ ಲಾರೆನ್ಸ್ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ವೇದಿಕೆಯನ್ನು ಅಲಂಕರಿಸಿದ್ದರು:

* ವಂದನೀಯ ಫಾದರ್ ಜೋನ್ಸನ್ ಡೆನ್ಜಿಲ್ ಪಿರೇರಾ (ಸಹಾಯಕ ಧರ್ಮಗುರುಗಳು, ಸುರತ್ಕಲ್ ಚರ್ಚ್)

* ಪಾವ್ಲ್ ರೊಲ್ಫಿ ಡಿಕೋಸ್ತ (ಮಾಜಿ ಅಧ್ಯಕ್ಷರು, ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.)

* ಜೋರ್ಜ್ ಲಿಗೋರಿ ಡಿಸೋಜ (ಉಪಾಧ್ಯಕ್ಷರು, ಚರ್ಚ್ ಪಾಲನಾ ಸಮಿತಿ)

* ಆಶಾ ಪಿಂಟೋ (ಕಾರ್ಯದರ್ಶಿ, ಚರ್ಚ್ ಪಾಲನಾ ಸಮಿತಿ)

* ಓಲ್ವಿನ್ ಡಿಸೋಜ (ಅಧ್ಯಕ್ಷರು, ಕಥೊಲಿಕ್ ಸಭಾ ಸುರತ್ಕಲ್ ಘಟಕ)

* ಜಾನೆಟ್ ಡಿಸೋಜ (ಕಾರ್ಯದರ್ಶಿ ಸುರತ್ಕಲ್ ಘಟಕ)

* ಆಶಾ ರೊಡ್ರಿಗಸ್ (ವಲಯ ಕಾರ್ಯದರ್ಶಿ)

ಕಾರ್ಯಕ್ರಮದ ಮುಖ್ಯಾಂಶಗಳು :

ಪ್ರಿಯಾ ಲೋಬೊ ಅವರು ಸನ್ಮಾನ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು. ಸನ್ಮಾನ ಸ್ವೀಕರಿಸಿದವರ ಪರವಾಗಿ ಲವಿಟಾ ಮತ್ತು ಪ್ರೀತಮ್ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ವೀರಾ ಪಿಂಟೋ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಲಯದ ನೂರಾರು ಭಕ್ತಾದಿಗಳು ಮತ್ತು ಪೋಷಕರು ಭಾಗವಹಿಸಿದ್ದರು.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page