August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಂತಾರಾಜ್ಯ ಮಾದಕವಸ್ತು ಮಾರಾಟ ಜಾಲ ಪತ್ತೆ – ಕೇರಳ ಮೂಲದ ಮೂವರು ಕಿಲಾಡಿಗಳ ಬಂಧನ

ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ, ಭಾರಿ ಪ್ರಮಾಣದ ಎಂಡಿಎಂಎ (MDMA) ಮಾದಕವಸ್ತು ಸಾಗಾಟ ಮಾಡುತ್ತಿದ್ದ ಅಂತಾರಾಜ್ಯ ಜಾಲದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ದ್ರವ್ಯ ಹಾಗೂ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳು:

* ಮುಹಮ್ಮದ್‌ ಅಜ್ಮಲ್‌ ಸಿ. @ ಅಜ್ಜು (30), ಕೋಝಿಕೋಡ್, ಕೇರಳ.

* ಇಸ್ಮಾಯಿಲ್‌ (28), ವಯನಾಡ್‌, ಕೇರಳ.

* ಸಂಶೀರ್‌ (27), ಕೊಝಿಕೋಡ್‌, ಕೇರಳ.

ಘಟನೆಯ ವಿವರ:

ದಿನಾಂಕ 18-02-2026 ರಂದು ಆರೋಪಿಗಳು ಪುತ್ತೂರು ಕಡೆಯಿಂದ ಸುಳ್ಯಕ್ಕೆ ಕಾರಿನಲ್ಲಿ ಅಕ್ರಮವಾಗಿ ಮಾದಕವಸ್ತು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ವಾಹನ ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸುಮಾರು 5,38,800 ರೂಪಾಯಿ ಮೌಲ್ಯದ 53.58 ಗ್ರಾಂ ಎಂಡಿಎಂಎ ಪತ್ತೆಯಾಗಿದೆ.

ಆರೋಪಿಗಳ ವಶದಿಂದ ಒಂದು ಕಾರು, ಮಾರಕಾಸ್ತ್ರ (ತಲವಾರು), ಮೊಬೈಲ್‌ ಫೋನ್‌ಗಳು ಹಾಗೂ 10,000 ರೂಪಾಯಿ ನಗದನ್ನು ಜಪ್ತಿ ಮಾಡಲಾಗಿದೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಎನ್‌ಡಿಪಿಎಸ್ (NDPS) ಕಾಯ್ದೆ ಹಾಗೂ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಅಂತಾರಾಜ್ಯ ಜಾಲದ ನಂಟು:

ಬಂಧಿತರು ಕೇರಳ, ಗೋವಾ ಮತ್ತು ಕರ್ನಾಟಕದ ವಿವಿಧ ಭಾಗಗಳಿಗೆ ಮಾದಕವಸ್ತು ಪೂರೈಸುವ ಜಾಲ ಹೊಂದಿದ್ದಾರೆ. ಇವರ ವಿರುದ್ಧ ಕೇರಳದ ಕೋಝಿಕೋಡ್, ಕಣ್ಣೂರು ಮತ್ತು ವಯನಾಡ್ ಜಿಲ್ಲೆಗಳಲ್ಲಿ ಈಗಾಗಲೇ ಪ್ರಕರಣಗಳು ದಾಖಲಾಗಿದ್ದು, ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದರು. ಮುಖ್ಯ ಆರೋಪಿ ಮುಹಮ್ಮದ್ ಅಜ್ಮಲ್ ಈ ಹಿಂದೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಮತ್ತೊಂದು ಡ್ರಗ್ಸ್ ಪ್ರಕರಣದಲ್ಲೂ ಆರೋಪಿಯಾಗಿದ್ದಾನೆ.

ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ತಂಡ:

ಪುತ್ತೂರು ಉಪ ವಿಭಾಗದ ಡಿವೈಎಸ್‌ಪಿ ಪ್ರಮೋದ್ ಕುಮಾರ್, ಇನ್ಸ್‌ಪೆಕ್ಟರ್‌ಗಳಾದ ಸುನಿಲ್ ಕುಮಾರ್ ಮತ್ತು ನಂದ ಕುಮಾರ್, ಉಪನಿರೀಕ್ಷಕರಾದ ಗುಣಪಾಲ ಮತ್ತು ಸುಶ್ಮಾ ಜೆ. ಭಂಡಾರಿ ಅವರ ನೇತೃತ್ವದ ವಿಶೇಷ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ. ತಂಡದಲ್ಲಿ ಸಿಬ್ಬಂದಿಗಳಾದ ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಹರ್ಷಿತ್, ಪರಮೇಶ್ವರ ಗೌಡ ಸೇರಿದಂತೆ ಗಣಕಯಂತ್ರ ವಿಭಾಗದ ಸಿಬ್ಬಂದಿಗಳು ಸಹಕರಿಸಿದ್ದಾರೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page