April 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಧರ್ಮಸ್ಥಳಕ್ಕೆ ಸೋದೆ ಮಠದ ಶ್ರೀಗಳ ಭೇಟಿ – ಹೆಗ್ಗಡೆಯವರ ಬೀಡಿನಲ್ಲಿ ಪಾದಪೂಜೆ, ಗೌರವ ಸಮರ್ಪಣೆ

ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿಯವರು ಮಾರ್ಚ್ 11ರಂದು ಬುಧವಾರ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಶ್ರೀಗಳನ್ನು ಭವ್ಯ ಮೆರವಣಿಗೆಯ ಮೂಲಕ ಅತ್ಯಂತ ಸಡಗರದಿಂದ ಸ್ವಾಗತಿಸಲಾಯಿತು.

ಕ್ಷೇತ್ರದ ಸಂಪ್ರದಾಯದಂತೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಸ್ವಾಮೀಜಿಯವರು, ದೇವರಿಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ಸಲ್ಲಿಸಿದರು.

ಬೀಡಿನಲ್ಲಿ ಧಾರ್ಮಿಕ ವಿಧಿವಿಧಾನ:

ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನಿವಾಸವಾದ ‘ಬೀಡು’ವಿಗೆ ಸ್ವಾಮೀಜಿಯವರು ಆಗಮಿಸಿದರು. ಈ ಸಂದರ್ಭದಲ್ಲಿ ಹೆಗ್ಗಡೆಯವರ ಕುಟುಂಬಸ್ಥರು ಶ್ರೀಗಳ ಪಾದಪೂಜೆ ನೆರವೇರಿಸಿ ಆಶೀರ್ವಾದ ಪಡೆದರು. ಡಾ. ವೀರೇಂದ್ರ ಹೆಗ್ಗಡೆಯವರು ಶ್ರೀಗಳಿಗೆ ಶಾಲು ಹೊದಿಸಿ ಭಕ್ತಿಪೂರ್ವಕವಾಗಿ ಗೌರವಿಸಿದರು.

ಉಪಸ್ಥಿತರಿದ್ದ ಗಣ್ಯರು:

ಈ ಸಂದರ್ಭದಲ್ಲಿ ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ಶ್ರೇಯಸ್ ಕುಮಾರ್ ಅವರು ಉಪಸ್ಥಿತರಿದ್ದು ಸ್ವಾಮೀಜಿಯವರ ಕೃಪೆಗೆ ಪಾತ್ರರಾದರು.

You may also like

News

ಬಂಟ್ವಾಳದ ತೌಹೀದ್ ಶಾಲೆಗೆ ಕೀರ್ತಿ ತಂದ ಆಭಿದುನ್ನೀಸ – SSLC ಪರೀಕ್ಷೆಯಲ್ಲಿ ಭರ್ಜರಿ ಸಾಧನೆ

ಇತ್ತೀಚೆಗೆ ಪ್ರಕಟಗೊಂಡ ರಾಜ್ಯ ಮಟ್ಟದ SSLC ಪರೀಕ್ಷಾ ಫಲಿತಾಂಶದಲ್ಲಿ ಬಂಟ್ವಾಳದ ತೌಹೀದ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಆಭಿದುನ್ನೀಸ ಎಂ. ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ
News

ಪಾಲ್ದನೆ ಚರ್ಚ್‌ನಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ – ವೃತ್ತಿ ಮಾರ್ಗದರ್ಶನ ಶಿಬಿರ ಯಶಸ್ವಿ

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ಸರಿಯಾದ ವೃತ್ತಿಜೀವನವನ್ನು ಆರಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ, ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆಯ ಸಂತ ತೆರೆಸಾ ಚರ್ಚ್‌ನ ಶೈಕ್ಷಣಿಕ ಆಯೋಗದ ವತಿಯಿಂದ ಇತ್ತೀಚೆಗೆ

You cannot copy content of this page